ಹೊಸದಿಲ್ಲಿ: ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿಯನ್ನು ಪ್ರಧಾನಿ ಹುದ್ದೆಗೆ ಅನುಮೋದಿಸಿದ್ದಾರೆ.
ಇಂದು ಇಲ್ಲಿ ನಡೆದ ಎನ್ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ನರೇಂದ್ರ ಮೋದಿಯನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ಪ್ರಧಾನಿ ಅಭ್ಯರ್ಥಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಈ ವೇಳೆ ಮಾತನಾಡಿದ ಜೆಡಿಯು ವರಿಷ್ಠ ನಿತೀಶ್ ಕುಮಾರ್, “ವಿರೋಧ ಪಕ್ಷಗಳ ಮೈತ್ರಿಕೂಟವು ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನರೇಂದ್ರ ಮೋದಿ ಮಾತ್ರ ದೇಶಕ್ಕಾಗಿ ಕೆಲಸ ಮಾಡಿದ್ದಾರೆ” ಎಂದು ಪ್ರಶಂಸಿಸಿದರು.