Home Uncategorized ನಾವು ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ: HDK ಹೇಳಿಕೆಗೆ ಸಚಿವ ಕೃಷ್ಣ ಭೈರೇಗೌಡ ಟಾಂಗ್!

ನಾವು ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ: HDK ಹೇಳಿಕೆಗೆ ಸಚಿವ ಕೃಷ್ಣ ಭೈರೇಗೌಡ ಟಾಂಗ್!

13
0

ಬೆಂಗಳೂರು : 2024ಕ್ಕೆ ಡಿಕೆಶಿ ತಿಹಾರ್ ಜೈಲಿಗೆ‌ ಹೋಗ್ತಾರೆ ಎಂಬ ಹೆಚ್​ಡಿಕೆ ಹೇಳಿಕೆ ವಿಚಾರ ‘ ಬೇರೆ ಪಕ್ಷದ ರಾಜಕೀಯ ಹೇಳಿಕೆ ಬಗ್ಗೆ ಹೆಚ್ಚು ಗಮನ ಕೊಡಲ್ಲ, ಹೆಚ್ ಡಿಕೆ ಹೇಳಿಕೆಗೆ ಡಿಕೆಶಿ ಈಗಾಗಲೇ ಉತ್ತರಿಸಿದ್ದಾರೆ. ಬಿಜೆಪಿ‌ ಜೊತೆ ಜೆಡಿಎಸ್ ಕೈಜೋಡಿಸಿದೆ. ಡಿಕೆಶಿ ಅವರನ್ನು ಜೈಲಿಗೆ ಕಳಿಸುವ ಷಡ್ಯಂತ್ರವಿದೆ ಎಂಬುದು ಹೆಚ್ ಡಿಕೆ ಮಾತಲ್ಲಿ‌ ಹೇಳಿದ್ದಾರೆ. ನಾವು ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ. ಜನ ನಮಗೆ ಆಶೀರ್ವಾದ ಮಾಡಿದ್ದು, ಜನಪರ ಆಡಳಿತ‌ ನೀಡ್ತಿದ್ದೇವೆ ಎನ್ನುವ ಮೂಲಕ ಜೆಡಿಎಸ್, ಬಿಜೆಪಿ ನಾಯಕರಿಗೆ ಕೃಷ್ಣ ಭೈರೇಗೌಡ ತಿರುಗೇಟು ನೀಡಿದ್ದಾರೆ.

Security: ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ Z ಭದ್ರತೆ ನೀಡಲು ರಾಜ್ಯ ಸರ್ಕಾರ ತೀರ್ಮಾನ

ಕೇಂದ್ರ ಬರ ಅಧ್ಯಯನ ತಂಡ ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಲಿದೆ. ಎಷ್ಟು ಪರಿಹಾರ ಕೊಡುತ್ತಾರೆ ನೋಡೋಣ. ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದ ತಂಡ ಪರಿಸ್ಥಿತಿ ಅವಲೋಕನ ಮಾಡಿದೆ. ಕುಡಿಯುವ ನೀರು,‌ ನರೇಗಾ ಕಾಮಗಾರಿ, ಮೇವು‌ ಪರಿಸ್ಥಿತಿ ಅವಲೋಕಿಸಿದ್ದಾರೆ. ನಮ್ಮ ಮನವಿ ಆಧಾರದಲ್ಲಿ ಬರ ಅಧ್ಯಯನ ತಂಡ ಬಂದು ರಾಜ್ಯದಲ್ಲಿ ಪ್ರವಾಸ ಮಾಡಿದೆ. ಪರಿಶೀಲನೆ ಸಂದರ್ಭದಲ್ಲಿ ನಮ್ಮ ಮನವಿ ವಸ್ತುಸ್ಥಿತಿಯಿಂದ ಕೂಡಿತ್ತು. ತಳಮಟ್ಟದಲ್ಲಿ ಸಾಕಷ್ಟು ರೈತರಿಗೆ ಬೆಳೆ ಹಾನಿ ತೊಂದರೆ ಆಗಿದೆ ಎಂದು ಮನವರಿಕೆಯಾಗಿದೆ. ಹಿಂಗಾರು ಮಳೆ ತೊಂದರೆ ಆಗಬಹುದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ವಿಚಿತ್ರ ಹವಾಮಾನ ಪರಿಸ್ಥಿತಿ ಇದೆ. ಕೆಲವು ತಿಂಗಳಲ್ಲಿ ವಾಡಿಕೆಗಿಂತ ಮಳೆ ಜಾಸ್ತಿಯಾದರೆ, ಕೆಲವು ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ. ಮಳೆ ಸ್ಥಿತಿಗತಿಗಳ ಬಗ್ಗೆ‌ ಸ್ಪಷ್ಟತೆ ಇಲ್ಲದ ವಾತಾವರಣವಿದೆ. ಹವಾಮಾನ ಏರುಪೇರನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಇದಕ್ಕನುಗುಣವಾಗಿ ಸರ್ಕಾರದ ನೀತಿ, ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವರಿಕೆ ಮಾಡಿದ್ದೇವೆ” ಎಂದು ಹೇಳಿದರು.

The post ನಾವು ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ: HDK ಹೇಳಿಕೆಗೆ ಸಚಿವ ಕೃಷ್ಣ ಭೈರೇಗೌಡ ಟಾಂಗ್! appeared first on Ain Live News.

LEAVE A REPLY

Please enter your comment!
Please enter your name here