Home Uncategorized ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ; ಒಡಹುಟ್ಟಿದ ಅಣ್ಣನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ತಮ್ಮ

ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ; ಒಡಹುಟ್ಟಿದ ಅಣ್ಣನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ತಮ್ಮ

36
0

ಬೆಳಗಾವಿ: ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ತಮ್ಮ ತನ್ನ ಒಡಹುಟ್ಟಿದ ಅಣ್ಣನನ್ನು ಕೊಂದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ತಮ್ಮ ಅಜ್ಮದ್ ಶೇಖ್‌ ಅಣ್ಣ ಅಕ್ಬರ್ ಶೇಖ್​ನನ್ನು ಕೊಲೆ ಮಾಡಿದ್ದಾನೆ. ಅಕ್ಬರ್ ಬೈಕ್ ಮೇಲೆ ಕಬ್ಬೂರದಿಂದ ಚಿಕ್ಕೋಡಿಗೆ ತೆರಳುವಾಗ ಉಮರಾಣಿ ಗ್ರಾಮದ ಹೊರ ವಲಯದ ಹೆದ್ದಾರಿ ಮೇಲೆ ಅಜ್ಮದ್ ತನ್ನ ಕಾರಿನಲ್ಲಿ ಹಿಂಬಾಲಿಸಿ ಕಾರಿನಿಂದ ಬೈಕ್‌ಗೆ ಗುದ್ದಿ ಕೆಳಗೆ ಬೀಳಿಸಿ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಯ ನಂತರ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಫುಡ್​ ಡೆಲಿವರಿ ಬಾಯ್​ಗೆ ಗಾಯ

ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆ ಬಳಿ ಅಪಘಾತ ಸಂಭವಿಸಿದೆ. ಫುಡ್​ ಡೆಲಿವರಿ ಬಾಯ್ ಮಂಜುನಾಥ್​ ಬೈಕ್​ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಫುಡ್​ ಡೆಲಿವರಿ ಬಾಯ್ ಕಾಲಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮಂಜುನಾಥ್​ಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಮನೆ ಕೆಲಸ ಏನಿದ್ರೂ ಮನೆಯವ್ರಿಗೆ ಅಂದ್ರೆ ಪತ್ನಿಗೆ ಸೀಮಿತ ಅನ್ನೋ ಪತಿಯಾ ನೀವು? ಹಾಗಾದರೆ ಇದನ್ನೊಮ್ಮೆ ಓದಿಕೊಳ್ಳಿ!

ತೊಗರಿ, ಹತ್ತಿ ಬೆಳೆ ನಡುವೆ ಬೆಳೆದಿದ್ದ 9 ಕೆಜಿ ಗಾಂಜಾ ಜಪ್ತಿ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಯಾತನೂರು ಬಳಿ ತೊಗರಿ, ಹತ್ತಿ ಬೆಳೆ ನಡುವೆ ಬೆಳೆದಿದ್ದ 9 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಹಾಗೂ ಬೇಲೂರು ಗ್ರಾಮದ ಪೀರಪ್ಪ ಚೌಧರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here