ಬೆಂಗಳೂರು: ವಿಧಾನ ಪರಿಷತ್ನ ಸರ್ಕಾರಿ ಮುಖ್ಯ ಸಚೇತಕ ಡಾ. ವೈ. ಎ. ನಾರಾಯಣಸ್ವಾಮಿ (Naraynswamy) ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವಂತೆ ತಿಳಿಸಿದ್ದು, ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುವುದು.
ವೈ. ಎ. ನಾರಾಯಣಸ್ವಾಮಿ 2018 ರ ವಿಧಾಸನಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಹೆಬ್ಬಾಳ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ನ ಶಾಸಕ ಸುರೇಶ್ ಬಿ ಎಸ್ ವಿರುದ್ಧ 21140 ಮತಗಳ ಅಂತರದಿಂದ ಸೋತಿದ್ದರು. ನಂತರ ನಾರಾಯಣಸ್ವಾಮಿ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದರು.
ಇದನ್ನೂ ಓದಿ: ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ಕಿಸಿ
2022ರ ಮಾರ್ಚ ವಿಧಾನ ಪರಿಷತ್ನಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಸರ್ಕಾರ, ನಾರಾಯಾಣಸ್ವಾಮಿ ಅವರನ್ನು ಮುಖ್ಯ ಸಚೇತಕರಾಗಿ ನೇಮಕ ಮಾಡಿತು. ಈ ಆದೇಶ ಪ್ರತಿಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಓದಿ ಶುಭ ಹಾರೈಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ