Home ಕರ್ನಾಟಕ ಪ್ರಜ್ವಲ್​​ ರೇವಣ್ಣರನ್ನು ದೇವೇಗೌಡ ಅವರೇ ವಿದೇಶಕ್ಕೆ ಕಳುಹಿಸಿದ್ದಾರೆ : ಸಿಎಂ ಸಿದ್ದರಾಮಯ್ಯ

ಪ್ರಜ್ವಲ್​​ ರೇವಣ್ಣರನ್ನು ದೇವೇಗೌಡ ಅವರೇ ವಿದೇಶಕ್ಕೆ ಕಳುಹಿಸಿದ್ದಾರೆ : ಸಿಎಂ ಸಿದ್ದರಾಮಯ್ಯ

3
0

ಯಾದಗಿರಿ : ಲೈಂಗಿಕ ಹಗರಣದ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್.​ಡಿ ದೇವೇಗೌಡ ಅವರೇ ಯೋಜನೆ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾದ ವೇಳೆ ಮಾತನಾಡಿದ ಅವರು,  “ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಬಿಜೆಪಿಯವರೇ ತಾನೇ, ಪ್ರಜ್ವಲ್ ರೇವ‍ಣ್ಣ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಯಾವುದೇ ಸಂಬಂಧ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಪೆನ್​ಡ್ರೈವ್ ಪ್ರಕರಣದ ಹಿಂದೆ ಡಿಕೆಶಿ ಕೈವಾಡ ಇದೆ ಎಂಬ ಎಚ್‌ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ” ಕಾರ್ತಿಕ್ ಎಂಬವರು ಪ್ರಜ್ವಲ್  ಕಾರು ಚಾಲಕ ಆಗಿದ್ದ. ಈ ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಕುಮಾರಸ್ವಾಮಿ ಕೇವಲ ರಾಜಕಾರಣಕ್ಕಾಗಿ ಡಿ.ಕೆ.ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ” ಎಂದು ಹೇಳಿದರು.

ಎಲ್ಲ ವಿಚಾರ ಗೊತ್ತಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಜ್ವಲ್​ಗೆ ಯಾಕೆ ಕೊಟ್ಟರು. ಪ್ರಕರಣದ ತನಿಖೆಗೆ ಎಸ್​​ಐಟಿ ರಚನೆ ಮಾಡಲಾಗಿದ್ದು, ಎಸ್​ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು

LEAVE A REPLY

Please enter your comment!
Please enter your name here