Home ಕರ್ನಾಟಕ ಪ್ರಧಾನಿ ಭೇಟಿಗೆ ಸಮಯ ನಿಗದಿ | ದಿಲ್ಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ

ಪ್ರಧಾನಿ ಭೇಟಿಗೆ ಸಮಯ ನಿಗದಿ | ದಿಲ್ಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ

5
0

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿದ್ದು, ಪ್ರಧಾನಿ ಹಾಗೂ ಕೇಂದ್ರ ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಹಾಗಾಗಿ ಇಂದು (ಗುರುವಾರ) ದಿಲ್ಲಿಗೆ ತೆರಳಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಲಿದ್ದೇನೆ. ಅಲ್ಲದೆ, ರಾಜ್ಯದ ಯೋಜನೆಗಳಿಗೆ ಕೇಂದ್ರ ಸರಕಾರದಿಂದ ಸಿಗಬೇಕಿರುವ ಅನುದಾನದ ಕುರಿತು ಪ್ರಸ್ತಾಪಿಸಲಿದ್ದೇನೆ. ಆದ್ದರಿಂದ ರಾಜ್ಯದ ಸಂಸದರ, ರಾಜ್ಯಸಭಾ ಸದಸ್ಯರ ಜತೆ ಸಭೆ ನಡೆಸಿ, ಮಾಹಿತಿ ಕಲೆ ಹಾಕಲಿದ್ದೇನೆ” ಎಂದು ಮಾಹಿತಿ ನೀಡಿದರು.

ದಿಲ್ಲಿ ಪ್ರವಾಸದಲ್ಲಿ ನನ್ನ ಜತೆ ವಿವಿಧ ಇಲಾಖೆಗಳ ಸಚಿವರೂ ಇರಲಿದ್ದಾರೆ. ಅಲ್ಲಿ ಭೂಸಾರಿಗೆ ಸಚಿವರನ್ನು ಭೇಟಿಯಾಗಿ, ಗೃಹ ಸಚಿವರ ಜೊತೆ ಭೇಟಿಯಾಗಿ ಮಾತುಕತೆ ನಡೆಸಲಿದ್ದೇವೆ. ಪ್ರಧಾನಿ ಹಾಗೂ ನಿತಿನ್ ಗಡ್ಕರಿ ಭೇಟಿಗೆ ಸಮಯ ನಿಗದಿಯಾಗಿದೆ. ಗೃಹ ಸಚಿವರ ಭೇಟಿಗೆ ಇನ್ನಷ್ಟೇ ಸಮಯ ನಿಗದಿಯಾಗಬೇಕಿದೆ ಎಂದರು.

LEAVE A REPLY

Please enter your comment!
Please enter your name here