ದೇವನಹಳ್ಳಿ: ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದು ತಂದೆ ಆಕ್ರೋಶ ಬರಿತನಾಗಿ, ಮಗಳು ನಿದ್ರೆ ಮಾಡುವಾಗ ಕತ್ತು ಕೊಯ್ದು ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಕವನ (20) ತಂದೆಯಿಂದಲೇ ಹತ್ಯೆಯಾದ ಮೃತ ದುರ್ದೈವಿ. ಮಗಳನ್ನು ಕೊಂದ ತಂದೆ ಮಂಜುನಾಥ್ (47) ಘಟನೆ ನಂತರ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಮಗಳು ಹುಡುಗನ್ನೊಬ್ಬನನ್ನು ಪ್ರೀತಿಸುತ್ತಿರುವ ವಿಷಯ ತಿಳಿದು ಅಕ್ರೋಶಗೊಂಡಿದ್ದರು, ಮನೆಯಲ್ಲಿ ಮಗಳ ಕತ್ತನ್ನು ಕೊಯ್ದು ಹತ್ಯೆ ಮಾಡಿದ್ದ, ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮಂಜುನಾಥ್ ಗೆ ಮೂವರು ಹೆಣ್ಣು ಮಕ್ಕಳು ಇರುತ್ತಾರೆ. ಕಿರಿಯ ಮಗಳ ಪ್ರೀತಿ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಪ್ರೀತಿಸಿದವನ ಜೊತೆ ಹೋಗುವುದಾಗಿ ಕಿರಿಮಗಳು ಠಾಣೆಯಲ್ಲಿ ಪಟ್ಟು ಹಿಡಿದಿದ್ದಳು, ಇದರಿಂದ ಆಕ್ರೋಶಗೊಂಡಿದ್ದ ತಂದೆ. ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಎರಡನೇ ಮಗಳನ್ನು ಕೊಲೆ ಮಾಡಿದ್ದಾನೆ. ತಡರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.
ಕೊಲೆಯಾದ ಮಗಳಿಗೆ ಮದುವೆ ಫಿಕ್ಸ್ ಆಗಿ ಮುರಿದು ಹೋಗಿತ್ತು, ಮದುವೆ ಮುರಿದು ಹೋಗಲು ಕಾರಣ ಕವನಾನೇ ಕಾರಣವಾಗಿದ್ದರಿಂದ ತಂದೆ ಬೇಸತ್ತಿದ್ದ. ಇದಾದ ಬಳಿಕ ಕವನಾ ಪೋಷಕರ ಮುಂದೆಯೇ ಪ್ರಿಯಕರನ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನ ನೋಡಿ ತಾನೇ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದನಂತೆ. ಮಾರ್ಯಾದೆಗೆ ಅಂಜಿ ತಡರಾತ್ರಿ ಕವನಾಳ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
The post ಪ್ರೀತಿಯಲ್ಲಿ ಬಿದ್ದ ಇಬ್ಬರು ಹೆಣ್ಣು ಮಕ್ಕಳು: ಮಾರ್ಯಾದೆಗೆ ಅಂಜಿ ಒಬ್ಬ ಮಗಳ ಕತ್ತು ಕೊಯ್ದ ತಂದೆ..! appeared first on Ain Live News.