Home Uncategorized ಪ್ರೇಮಕುಮಾರಿ ಪ್ರಕರಣ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ; ಮಾಜಿ ಸಚಿವ ರಾಮದಾಸ್​ಗೆ ಹಿನ್ನಡೆ

ಪ್ರೇಮಕುಮಾರಿ ಪ್ರಕರಣ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ; ಮಾಜಿ ಸಚಿವ ರಾಮದಾಸ್​ಗೆ ಹಿನ್ನಡೆ

43
0

ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್‌.ಎ. ರಾಮದಾಸ್​ ಅವರಿಗೆ ಸುಪ್ರೀಂಕೋರ್ಟ್ ನಲ್ಲೂ ಹಿನ್ನಡೆಯಾಗಿದೆ. ನವದೆಹಲಿ: ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್‌.ಎ. ರಾಮದಾಸ್​ ಅವರಿಗೆ ಸುಪ್ರೀಂಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್​​ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.

ಇದನ್ನು ಓದಿ: ಕಾವೇರಿ ಜಲ ವಿವಾದ: ಸೆಪ್ಟೆಂಬರ್ 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.

ನಂತರ ರಾಮದಾಸ್ ಅವರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

LEAVE A REPLY

Please enter your comment!
Please enter your name here