ಬೆಂಗಳೂರು : ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರದ ಹಣ ಬಿಡುಗಡೆ ಮಾಡಲು ವಿಳಂಬ ಧೋರಣೆ ತೋರುತ್ತಿದೆ. ಆ ಮೂಲಕ ರಾಜ್ಯದ ಜನತೆಗೆ ಅದರಲ್ಲೂ ರೈತ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ವಿರುದ್ಧ ಇಂದು( ಮಂಗಳವಾರ) ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.
ಧರಣಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೆವಾಲ, ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವ ಸಂಪುಟ ಸದಸ್ಯರು, ಶಾಸಕರು ಹಾಜರಿದ್ದರು.