ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಆದರೆ ಬಲವಂತದ ಬಂದ್ಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್… ಬೆಂಗಳೂರು: ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಆದರೆ ಬಲವಂತದ ಬಂದ್ಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಇಂದು ಬಂದ್ ವಿಚಾರವಾಗಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಆಯುಕ್ತರು, ಬಲವಂತದ ಬಂದ್ಗೆ ಅವಕಾಶ ಇಲ್ಲ. ಇಂದು ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿ ವರೆಗೆ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ: ಕಾವೇರಿ ಕಿಚ್ಚು: ನಾಳೆ ಬೆಂಗಳೂರು ಬಂದ್; ಶಾಲಾ ಕಾಲೇಜ್ ಗಳಿಗೆ ರಜೆ, ಬಿಎಂಟಿಸಿ ಡೌಟ್, ಮೆಟ್ರೋ ಇರುತ್ತೆ
ನಗರದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. 60 ಕೆಎಸ್ಆರ್ಪಿ, 40 ಸಿಎಆರ್ ತುಕಡಿ ನಿಯೋಜನೆ ಮಾಡುತ್ತೇವೆ. ಅಗತ್ಯವಿದ್ದಲ್ಲಿ ತಮಿಳುನಾಡು ಸಾರಿಗೆ ಬಸ್ಗಳಿಗೆ ಭದ್ರತೆ ಒದಗಿಸುತ್ತೇವೆ. ಪೊಲೀಸರು, ಕೆಎಸ್ಆರ್ಪಿ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು, ಹೊಯ್ಸಳ ಪೊಲೀಸರು ಎಲ್ಲರು ಇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಅವಕಾಶ ಇಲ್ಲ. ಸಾರ್ವಜನಿಕರು ತಾವೇಗಿಯೇ ಬಂದ್ ಮಾಡಿದರೆ ತೊಂದರೆ ಇಲ್ಲ. ಆದರೆ, ಬಲವಂತವಾಗಿ ಬಂದ್ ಮಾಡುವಂತೆ ಇಲ್ಲ ಎಂದು ಬಿ ದಯಾನಂದ ಅವರು ತಿಳಿಸಿದ್ದಾರೆ.