Home Uncategorized ಬಸವೇಶ್ವರ ನಗರದ NPS ಶಾಲೆಯಲ್ಲಿ ಬಾಂಬ್ ಭೀತಿ, ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡು,...

ಬಸವೇಶ್ವರ ನಗರದ NPS ಶಾಲೆಯಲ್ಲಿ ಬಾಂಬ್ ಭೀತಿ, ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡು, ಮಕ್ಕಳು ಸುರಕ್ಷಿತ ಸ್ಥಳಕ್ಕೆ

27
0

ಬೆಂಗಳೂರಿನ(Bengaluru) ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ಬೆಂಗಳೂರು: ಬೆಂಗಳೂರಿನ(Bengaluru) ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ಇಂದು ಬಾಂಬ್ ಬೆದರಿಕೆ ಬಂದಿದೆ. ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಾಲೆ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಬಂದಿದ್ದು, ಬೆಳಗ್ಗೆ 11.30 ಮೇಲ್ ನೋಡಿದ ಶಾಲೆ ಸಿಬ್ಬಂದಿ‌, ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಸವೇಶ್ವರನಗರ, ರಾಜಾಜಿನಗರ ಠಾಣೆ ಪೊಲೀಸರ ಭೇಟಿ ನೀಡಿದ್ದಾರೆ. 

Karnataka | Bomb threat received by NPS School, Rajajinagar under Basaveshwar Nagar PS. We’ve ensured students are taken to a safe place, bomb disposal & dog squad have reached the spot. Case to be registered and investigation is being done: Laxman B Nimbaragi, DCP West Bengaluru pic.twitter.com/r9fBnhdWjI
— ANI (@ANI) January 6, 2023

ಅಲ್ಲದೇ ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢವಾಗಿದ್ದು, ಪ್ರಕರಣ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಪಶ್ಚಿಮ ವಿಭಾಗ ಪೊಲೀಸರುತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ: ಓರ್ವನ ಬಂಧನ

ಇ-ಮೇಲ್ ಬಂದಿರುವ ಕುರಿತು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ಬಿ. ನಿಂಬರಗಿ ಮಾತನಾಡಿದ್ದಾರೆ, “ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಪಿಎಸ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಡಿಕೆಶಿ ಮಾಲೀಕತ್ವದ ಶಾಲೆಗೂ ಬೆದರಿಕೆ, 2ನೇ ಪ್ರಕರಣ
ಬೆಂಗಳೂರಿನಲ್ಲಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದು ಇದು ಮೊದಲಲ್ಲ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮಾಲೀಕತ್ವದ ಬೆಂಗಳೂರಿನ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಪೊಲೀಸರ ತನಿಖೆ ವೇಳೆ ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿತ್ತು.

ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ!

10ನೇ ತರಗತಿಯ ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಪ್ಲ್ಯಾನ್ ಮಾಡಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಎನ್ನುವುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆರ್. ಆರ್. ನಗರ ಪೊಲೀಸರು ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪತ್ತೆ ಮಾಡಿದ್ದರು.

LEAVE A REPLY

Please enter your comment!
Please enter your name here