Home Uncategorized ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಕೋರಿ ಸಿಎಂಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಕೋರಿ ಸಿಎಂಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

20
0

ಬೆಂಗಳೂರು : ಬೆಂಗಳೂರು ನಗರದಿಂದ 25 ಕಿ.ಮೀ ದೂರದಲ್ಲಿರುವ ತಾವರೆಕೆರೆ ವ್ಯಾಪ್ತಿಯ ಸೀಗೇಹಳ್ಳಿಯಿಂದ ಸರಿಯಾದ ಸಾರಿಗೆ ಬಸ್ ವ್ಯವಸ್ಥೆ ಇಲ್ಲ. ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಬಾಲಕಿಯೊಬ್ಬಳು ಪತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾಳೆ.

ಬೆಂಗಳೂರು ಹೊರವಲಯದ ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿ.ವೈ.ಹರ್ಷಿಣಿ, ‘ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳು ಪರದಾಡಾಡುತ್ತಿದ್ದಾರೆ. ಬಸ್ ಗಳಿಲ್ಲದೆ ತೊಂದರೆಯಾಗುತ್ತಿದೆ. ಹೀಗಾಗಿ ಕೂಡಲೇ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾಳೆ.

ಸೀಗೇಹಳ್ಳಿ, ಬೆಂಗಳೂರು ನಗರದಿಂದ 25 ಕಿ.ಮೀ.ದೂರವಿದೆ. ಹತ್ತಿರದಲ್ಲೇ ಬಿಎಂಟಿಸಿ ಡಿಪೋ ಇದೆ. ಇಲ್ಲಿಂದ ಅನೇಕ ಕಡೆ ಬಸ್‍ಗಳ ವ್ಯವಸ್ಥೆಯನ್ನು ಬಿಎಂಟಿಸಿ ಕಲ್ಪಿಸಿದೆ. ಆದರೆ, ಅಕ್ಕಪಕ್ಕದಲ್ಲಿರುವ ವನಗನಹಟ್ಟಿ, ಚನ್ನೇನಹಳ್ಳಿ, ಜಟ್ಟಿಪಾಳ್ಯ, ಸೀಗೆಹಳ್ಳಿಯಿಂದ ಬೆಂಗಳೂರಿಗೆ ಬಸ್‍ಗಳ ವ್ಯವಸ್ಥೆಯೇ ಇಲ್ಲ. ಇದರಿಂದ ನಗರದಲ್ಲಿನ ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳಿಗೆ ತೊಂದರೆ ಆಗುತ್ತಿದೆ ಎಂದು ಹರ್ಷಿಣಿ ಅಳಲು ತೋಡಿಕೊಂಡಿದ್ದಾಳೆ.

ಬಸ್ ವ್ಯವಸ್ಥೆ ಕಲ್ಪಿಸಿ: ‘ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಬಸ್ ಬಿಡಬೇಕೆಂದು ಮನವಿ ಮಾಡಿದ್ದೇವೆ. ಈ ಪತ್ರಕ್ಕೆ ಸಂಸ್ಥೆಯ ಅಧಿಕಾರಿಗಳು ಯಾವುದೇ ಉತ್ತರ ನೀಡಿರುವುದಿಲ್ಲ. ಆದರೆ, ಪ್ರತಿ ಗುರುವಾರ ಹಾಗೂ ರವಿವಾರ ಸುಮ್ಮನಹಳ್ಳಿಯಿಂದ ಕಡಬಗೆರೆ ಮಾರ್ಗವಾಗಿ ರಾಯರ ಕಾಮದೇನು ದೇವಾಲಯಕ್ಕೆ ಪ್ರತಿಗಂಟೆಗೆ ಬಸ್ ಬಿಡಲಾಗುತ್ತಿದೆ.

ನಮಗೆ ದೇವಾಲಯದ ತೀರ್ಥ-ಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿರುತ್ತದೆ. ಈ ದೇಶದ ರಾಷ್ಟ್ರಪತಿ ಮಹಿಳೆಯಾಗಿರುತ್ತಾರೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷಿತ ಸಿಗುವಂತೆ ಮಾಡಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದವಾಗಿರುತ್ತದೆ ಎಂದು ಹರ್ಷಿಣಿ, ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾಳೆ.

LEAVE A REPLY

Please enter your comment!
Please enter your name here