Home Uncategorized ಬಿಜೆಪಿ, ಆರೆಸ್ಸೆಸ್ ಗೆ ಸ್ವಂತ ಇತಿಹಾಸ ಇಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆಯೂ ಇಲ್ಲ: ಪ್ರಿಯಾಂಕ್‌...

ಬಿಜೆಪಿ, ಆರೆಸ್ಸೆಸ್ ಗೆ ಸ್ವಂತ ಇತಿಹಾಸ ಇಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆಯೂ ಇಲ್ಲ: ಪ್ರಿಯಾಂಕ್‌ ಖರ್ಗೆ

34
0

ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೆಯುತ್ತಿತ್ತು. ಸಭಾಧ್ಯಕ್ಷ ಪೀಠದ ಮೇಲೆ ಕುಳಿತು ಕಾಗೇರಿ ನಾನು RSS ನವರು ಎಂದು ಹೇಳಿದ್ದರು. ದೇಶ ನಡೆಯುತ್ತಿರುವುದು ಭಗವದ್ಗೀತೆ, ಕುರಾನ್,ಬೈಬಲ್ ಮೇಲೆ ಅಲ್ಲ. ಯಾರು ಏನು ಬೇಕಾದರು ಹೇಳಲಿ ಕರ್ನಾಟಕದಲ್ಲಿ ಈಗ ನಡೆಯುತ್ತಿರುವುದು ಸಂವಿಧಾನದ ಸರ್ಕಾರ. ಬಸವ ತತ್ವ,ಅಂಬೇಡ್ಕರ್ ತತ್ವ ಮೇಲೆ ಸರ್ಕಾರ ನಡೀತಿದೆ ಎಂದು ಹೇಳಿದರು.

ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ. ಇದು ಕಾಂಗ್ರೆಸ್ ನಾಯಕರ ಆರೋಪ ಅಲ್ಲ. ಮಾಜಿ ಕೇಂದ್ರ ಸಚಿವ ಹಾಲಿ ಶಾಸಕರ ಆರೋಪ. 40 ಪರ್ಸೆಂಟ್ ಸರ್ಕಾರ ಬಿರುದು ಬಂದಿರೋದು ಬಿಜೆಪಿಯವರಿಂದ. 40 ಸಾವಿರ ಕೋಟಿ ಹಗರಣ ಇದೆ, ಹೆಣದ ಮೇಲೆ ಹಣ ಮಾಡಿದ್ದಾರೆ ಅಂದರೆ ಅದು ಮನುಷ್ಯತ್ವ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಿಜೆಪಿ ಶಾಸಕ ಯತ್ನಾಳ್‌ ಅವರು ದಾಖಲೆ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಯತ್ನಾಳ್ ಅವರೇ ಯಾವುದೇ ದಾಖಲೆ ಇದ್ರೆ ಜಸ್ಟೀಸ್ ಮೈಕಲ್ ಕುನೋ ಅವರ ಸಮಿತಿಗೆ ಕೊಡಿ. ಕೋವಿಡ್ ಭ್ರಷ್ಟಾಚಾರದಲ್ಲಿ ಕೇಂದ್ರಕ್ಕೂ ಪಾಲು ಹೋಗಿರಬಹುದು.  ಯತ್ನಾಳ್ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉತ್ತರ ಕೊಡಬೇಕು ಎಂದು ಹೇಳಿದರು.

ಬಿ.ವೈ ವಿಜಯೇಂದ್ರ ಅವರು ಈಗ ಯತೀಂದ್ರ ಅವರ ಮೇಲೆ ಶ್ಯಾಡೋ ಸಿಎಮ್ ಅಂತಾ ಆರೋಪ ಮಾಡುತ್ತಿದ್ದಾರೆ. ಕಳೆದ ಸರ್ಕಾರದಲ್ಲಿ ಯಾರು ಶ್ಯಾಡೋ ಸಿಎಮ್ ಆಗಿದ್ದರು ಎಂದು ಪ್ರಶ್ನಿಸಿದರು.

ಬಿಜೆಪಿಯವರು ಇತ್ತೀಚೆಗೆ ಹುಟ್ಟಿರೋದು. ಬಿಜೆಪಿ ಮತ್ತು RSS ಗೆ ಸ್ವಂತ ಇತಿಹಾಸ ಇಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆಯೂ ಇಲ್ಲ.ಅವರು ಸೃಷ್ಟಿಸಬೇಕಾಗಿದೆ. ಹಾಗಾಗಿ ವಾಟ್ಸಪ್ ಯುನಿವರ್ಸಿಟಿಯಲ್ಲಿ ಸುಳ್ಳು ಹಬ್ಬಿಸುತ್ತಿದ್ದಾರೆ.ಅದನ್ನೆ ಯುವಕರು ನಂಬುತ್ತಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here