ಬೆಂಗಳೂರು: ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ಮಧ್ಯೆ ತೀವ್ರ ಜಟಾಪಟಿಗೂ ಕಾರಣವಾಯಿತು. ಘೋಷಣೆ ಕೂಗಿದ್ದನ್ನು ಖಂಡಿಸಿ ವಿರೋಧ ಪಕ್ಷ ಬಿಜೆಪಿ ಸದನದ ಬಾವಿಗಿಳಿದು ಧರಣಿ ನಡೆಸಿತು. ಈ ಹಿನ್ನಲೆ ಕಲಾಪವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.