Home Uncategorized ಬೆಂಗಳೂರು: ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ ಡಾ.ಭುಜಂಗ ಶೆಟ್ಟಿ

ಬೆಂಗಳೂರು: ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ ಡಾ.ಭುಜಂಗ ಶೆಟ್ಟಿ

22
0

ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ಮೃತಪಟ್ಟ ಬಳಿಕವೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬೆಂಗಳೂರು: ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ಮೃತಪಟ್ಟ ಬಳಿಕವೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ದೇಶದ ಖ್ಯಾತ ನೇತ್ರ ತಜ್ಞರಾಗಿ ಡಾ.ಭುಜಂಗಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 69 ವಯಸ್ಸಾಗಿತ್ತು. ನಿನ್ನೆ ರೋಗಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದರು.  ಈ ವೇಳೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಭುಜಂಗಶೆಟ್ಟಿ ಸಾವನ್ನಪ್ಪಿದ್ದಾರೆ.

ವೈದ್ಯಕೀಯ ಜಗತ್ತಿನಲ್ಲಿ ನೇತ್ರದಾನದ ಕ್ರಾಂತಿ ಮಾಡಿದ್ದ ಡಾ.ಭುಜಂಗಶೆಟ್ಟಿ. ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ತಾವು ಮೃತಪಟ್ಟ ಮೇಲೆ ಕಣ್ಣು ದಾನ ಮಾಡಲು ಬಯಸಿದ್ದರು. ಅವರ ಇಚ್ಛೆಯಂತೆಯೇ  ನಿನ್ನೆ ತಡರಾತ್ರಿ ಡಾ. ರಾಜಕುಮಾರ್ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

LEAVE A REPLY

Please enter your comment!
Please enter your name here