ಪ್ರೀತಿ ವಿಚಾರಕ್ಕೆ ‘ಭಗ್ನ ಪ್ರೇಮಿ’ಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು: ಪ್ರೀತಿ ವಿಚಾರಕ್ಕೆ ‘ಭಗ್ನ ಪ್ರೇಮಿ’ಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ ಕೋಲಾರ ಮೂಲದ ಯುವಕ ಕಾಲೇಜು ಅವರಣದಲ್ಲೇ ಯುವತಿಗೆ ಇರಿದಿದ್ದಾನೆ. ಬಳಿಕ ತಾನೂ ಕೂಡ ಚಾಕು ಇರಿದುಕೊಂಡಿದ್ದು, ಕೂಡಲೇ ಇತರೆ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಸ್ನೇಹಿತನ ಪುತ್ರನ ಮೇಲೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಉದ್ಯಮಿ, ಹೃದಯಾಘಾತದಿಂದ ನಿಧನ
ಚಾಕು ಇರಿದುಕೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಸ್ತುತ ಕಾಲೇಜಿಗೆ ಸಂತ್ರಸ್ಥ ಯುವತಿಯ ಪೋಷಕರು ದೌಡಾಯಿಸಿದ್ದು ಕಾಲೇಜಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ಬೆಂಗಳೂರು: ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಮೂಲಗಳ ಪ್ರಕಾರ ಪ್ರೀತಿ ಪ್ರೇಮದ ವಿಚಾರಕ್ಕೆ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಯುವತಿಗೆ ಇರಿದ ಯುವಕ ಕಾಲೇಜಿನ ವಿದ್ಯಾರ್ಥಿಯಲ್ಲ.. ಬದಲಿಗೆ ಹೊರಗಿನವನಾಗಿದ್ದು ನಿತ್ಯ ಆಕೆಯನ್ನು ಹಿಂಬಾಲಿಸಿ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಆದರೆ ಇಂದು ಏಕಾಏಕಿ ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ ಯುವಕ ನೋಡ ನೋಡುತ್ತಲೇ ಯುವತಿಗೆ ಇರಿದಿದ್ದಾನೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅಂಕೋಲಾ ಬಳಿ ಭೀಕರ ಅಪಘಾತ; ಸಾರಿಗೆ ಬಸ್ಗೆ ಕಾರು ಡಿಕ್ಕಿ, ತಮಿಳುನಾಡಿನ ನಾಲ್ವರ ಸಾವು
ಸಾವನ್ನಪ್ಪಿದ ಯುವತಿ ಕೂಡ ಕೋಲಾರದ ಭಾಗದ ನಿವಾಸಿ ಎಂದು ಹೇಳಲಾಗುತ್ತಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.