Home Uncategorized ಬೆಂಗಳೂರು: ಕಿಲ್ಲರ್ BMTCಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ​ ಬೈಕ್ ಸವಾರ ಸಾವು

ಬೆಂಗಳೂರು: ಕಿಲ್ಲರ್ BMTCಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ​ ಬೈಕ್ ಸವಾರ ಸಾವು

28
0

ಬೆಂಗಳೂರಿನಲ್ಲಿ ಕಿಲ್ಲರ್ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ. ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸೋಮನಹಳ್ಳಿ ಬ್ರಿಡ್ಜ್​ ಬಳಿ ಈ ಘಟನೆ ನಡೆದಿದ್ದು, ಬ್ರಿಡ್ಜ್​ ಬಳಿ ಮುಂದೆ ತೆರಳುತ್ತಿದ್ದ, ಬೈಕ್​ಗೆ ಬಿಎಂಟಿಎಸ್​​ ಬಸ್​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. 

ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ದುರ್ಮರಣ!

ಮೃತ ಬೈಕ್ ಚಾಲಕನನ್ನು ವಿಜಯನಗರ ಕುಲದೀಪ್ ಬಗರೇಚಾ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್​ನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಸ್ಕೂಟರ್’ಗೆ ಬಿಎಂಟಿಸಿ ಬಸ್ ಡಿಕ್ಕಿ: 16 ವರ್ಷದ ಬಾಲಕಿ ದುರ್ಮರಣ

ಈ ಹಿಂದೆ ಕೆಳಗೆ ಬಿಎಂಟಿಸಿ (BMTC) ಬಸ್​ ಕೆಳಗೆ ಸಿಲುಕಿ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಬಳಿಕ ನವೆಂಬರ್​ 29 ರಂದು ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್​ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ನಡೆದಿತ್ತು. ಘಟನೆಯಲ್ಲಿ ಮಂಜುನಾಥ್(25 ವರ್ಷ), ಶಿವರಾಜ್(29 ವರ್ಷ) ಸಾವನ್ನಪ್ಪಿದ್ದರು. ಮೃತರು ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ತಿಳಿಬಂದಿತ್ತು. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.
 

LEAVE A REPLY

Please enter your comment!
Please enter your name here