ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಬುಧವಾರ ಬೆಳಗ್ಗೆ ಇಲ್ಲಿನ ಹೈಗ್ರೌಂಡ್ಸ್ ನಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸಕ್ಕೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.