ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು. ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು.
262 ಕಿಲೋ ಮೀಟರ್ ಉದ್ದದ ಅಷ್ಟಪಥ ಹೆದ್ದಾರಿ ಕಾಮಗಾರಿಯನ್ನು 16, 730 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ನಿತಿನ್ ಗಡ್ಕರಿ ಇಂದು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಹಾಗೂ ಸಂಸದ ಮುನಿಸ್ವಾಮಿ ಉಪಸ್ಥಿತರಿದರು.
#WATCH | Union Minister for Road Transport & Highways Nitin Gadkari inspected the progress of the Bengaluru – Chennai Expressway which is a 262 Km 8-lane layout worth Rs 16,730 Crores.
(Source: Nitin Gadkari’s office) pic.twitter.com/3LfDrKP61n
— ANI (@ANI) January 5, 2023
ಗಂಟೆಗೆ 120 ಕಿಲೋ ಮೀಟರ್ ವೇಗಕ್ಕೆ ತಕ್ಕಂತೆ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಣ ದೂರ 3000 ಕಿಲೋ ಮೀಟರ್ ನಿಂದ 262 ಕಿಲೋ ಮೀಟರ್ ಗೆ ಕಡಿಮೆಯಾಗಲಿದೆ.
ಈ ಯೋಜನೆಯಿಂದ ವಾಹನಗಳ ದಕ್ಷತೆಯ ವೆಚ್ಚ ಮತ್ತು ಇಂಧನ ಬಳಕೆ ಕಡಿಮೆಯಾಗಲಿದ್ದು, ಬೆಂಗಳೂರು ಮತ್ತು ಚೆನ್ನೈ ನಡುವಣ ಆರ್ಥಿಕ ಚಟುವಟಿಕೆ ಗರಿಗೆದರಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಹಬ್ ಗಳನ್ನು ಚೆನ್ನೈ ಬಂದರು ಜೊತೆಗೆ ಸಂಪರ್ಕ ಕಲ್ಪಿಸಲಿದೆ.