Home Uncategorized ಬೆಂಗಳೂರು: ಜ.6-7ರಂದು ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ

ಬೆಂಗಳೂರು: ಜ.6-7ರಂದು ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ

25
0

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಬೆಂಗಳೂರು ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ ಜನವರಿ 6 ಹಾಗೂ 7 ರಂದು ಬೆಳಗ್ಗೆ 8 ಗಂಟೆಯಿಂದ ಬೆಂಗಳೂರು ನಗರದ ಅಲ್ ಅಮೀನ್ ಕಾಲೇಜ್ ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ವ್ಯಾಪ್ತಿಯ ವಿವಿಧ ಡಿವಿಷನ್ ಗಳಿಂದ ಆಯ್ಕೆಯಾದ ಸುಮಾರು 500ಕ್ಕೂ ಅಧಿಕ ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದು, ವಿವಿಧ ವಿಭಾಗಗಳಲ್ಲಿ ಆಕರ್ಷಕ ವೇದಿಕೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕವಿಗಳಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಸ್ಥಳೀಯ ಶಾಸಕರಾದ ಎನ್.ಎ.ಹಾರಿಸ್, ರಿಝ್ವಾನ್ ಅರ್ಷದ್, ವಕ್ಫ್ ಬೋರ್ಡ್ ನಿಕಟ ಪೂರ್ವ ಅಧ್ಯಕ್ಷರಾದ ಎನ್.ಕೆ.ಎಂ ಶಾಫಿ ಸ‌ಅದಿ, ಅಲ್ ಅಮೀನ್ ಕಾಲೇಜ್ ಚೇರ್ಮಾನ್ ಉಮ್ಮರ್ ಇಸ್ಮಾಯಿಲ್ ಖಾನ್ ಹಾಗೂ ಪ್ರಮುಖ ಸಾದಾತುಗಳು, ಉಲಮಾ, ಉಮರಾ ನಾಯಕರು, ಸಂಘಟನೆ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here