ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಆರ್ ನಗರ ಮೆಡಿಕಲ್ ಕಾಲೇಜು ಎದುರು ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆರ್.ಆರ್.ನಗರ ನಿವಾಸಿ ಕೃತಿಕಾ(21) ಮೃತ ವಿದ್ಯಾರ್ಥಿನಿ. ಘಟನೆಯಲ್ಲಿ ಕೃತಿಕಾ ಸ್ನೇಹಿತೆ ಹಂಸ(22) ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಬುಧವಾರ ಸಂಜೆ 4.30ರ ಸುಮಾರಿಗೆ ಅಪಘಾತ ಸಂಭವಿಸಿದೆ
ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಆರ್ಆರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೊರಗೆ ಈ ಘಟನೆ ನಡೆದಿದೆ. ಇಬ್ಬರೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಸ್ಕೂಟರ್ಗೆ ಮೈಸೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.
ಮೃತ ವಿದ್ಯಾರ್ಥಿನಿ ಕೃತಿಕಾ ಶ್ರೀಧರ್ ಹಿಂಬದಿ ಪ್ರಯಾಣಿಕಳಾಗಿ ಸವಾರಿ ಮಾಡುತ್ತಿದ್ದರು. ಅವರು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದರು.
ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಂಸ ಎಡಭಾಗಕ್ಕೆ ಬಿದ್ದರು, ಬಲಭಾಗಕ್ಕೆ ಬಿದ್ದ ಕೃತಿಕಾ ಲಾರಿಯ ಚಕ್ರಗಳ ಕೆಳಗೆ ಸಿಲುಕಿದರು. ಇಬ್ಬರೂ ವಿದ್ಯಾರ್ಥಿಗಳನ್ನು ತಕ್ಷಣ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಒಂದು ಗಂಟೆಯ ನಂತರ ಕೃತಿಕಾ ಸಾವನ್ನಪ್ಪಿದರು. “ಹಂಸ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೃತಿಕಾ ಬಿಇಎಂಎಲ್ ಲೇಔಟ್ ನಿವಾಸಿಯಾಗಿದ್ದು, ಆಕೆಯ ತಂದೆ ಶ್ರೀಧರ್ ಕೂಡ ವೈದ್ಯರಾಗಿದ್ದಾರೆ. ಅದೇ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಚಾಲಕನನ್ನು ಬಂಧಿಸಲಾಗಿದೆ.
