ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಸುಕಿನಲ್ಲಿ ಯುವಕನೊಬ್ಬ ಸ್ವಯಂ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಪ್ರಕೃತಿ ಲೇಔಟ್ ನಿವಾಸಿ ಎಸ್ ಕೆ ಸಂಜಯ್ ಕುಮಾರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Tiger Attack in Kodagu: ಕೊಡಗಿನಲ್ಲಿ ಹುಲಿ ದಾಳಿಗೆ 12 ವರ್ಷದ ಬಾಲಕ ಸಾವು
ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣದಿಂದ ಪ್ರಸನ್ನ ಥಿಯೇಟರ್ ಕಡೆಗೆ ಸಂಜಯ್ ಕುಮಾರ್ ಬೈಕ್ನಲ್ಲಿ ಹೋಗುತ್ತಿದ್ದಾಗ ಮಧ್ಯರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಘವೇಂದ್ರ ಸ್ವಾಮಿ ಮಠದ ಬಳಿ ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಯುವಕ ಸಂಜಯ್ ಕುಮಾರ್ ಮೃತಪಟ್ಟಿದ್ದರು.
ಮಾಗಡಿ ರಸ್ತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.