Home Uncategorized ಬೆಂಗಳೂರು| ಮದ್ಯ ಸೇವಿಸಿ ಸ್ನೇಹಿತರ ನಡುವೆ ಗಲಾಟೆ: ಓರ್ವನ ಹತ್ಯೆ

ಬೆಂಗಳೂರು| ಮದ್ಯ ಸೇವಿಸಿ ಸ್ನೇಹಿತರ ನಡುವೆ ಗಲಾಟೆ: ಓರ್ವನ ಹತ್ಯೆ

35
0

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಮದ್ಯ ಸೇವಿಸಿದ ಸ್ನೇಹಿತರ ನಡುವೆ ಶುರುವಾದ ಗಲಾಟೆ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಕೊನೆಗೊಂಡ ಘಟನೆ ಇಲ್ಲಿನ ಹನುಮಂತನಗರ ಠಾಣಾ ವ್ಯಾಪ್ತಿಯ ಶ್ರೀನಿವಾಸ ನಗರ ಬಸ್ ನಿಲ್ದಾಣದ ಬಳಿ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ವಿಜಯ್(21) ಎಂದು ಗುರುತಿಸಲಾಗಿದೆ. ವಿಜಯ್ ಹಾಗೂ ಆತನ ಗೆಳೆಯರು ಡಿ.31ರ ರಾತ್ರಿ ಹೊಸ ವರ್ಷಾಚರಣೆ ಮಾಡಿದ್ದಾರೆ. ಮನೆಗೆ ತೆರಳುವಾಗ ವಿಜಯ್ ಹಾಗೂ ಆತನ ಗೆಳೆಯರ ನಡುವೆ ಗಲಾಟೆ ಆರಂಭವಾಗಿದೆ. ಆಟೋದಲ್ಲಿ ತೆರಳುತ್ತಿದ್ದಾಗ ಈ ಗಲಾಟೆ ವಿಕೋಪಕ್ಕೆ ತಿರುಗಿ ವಿಜಯ್‌ ನ ಎದೆಗೆ ಚಾಕುವಿನಿಂದ ಇರಿಯಲಾಗಿದೆ.

ಬಳಿಕ ಶ್ರೀನಿವಾಸನಗರ ಬಸ್ ನಿಲ್ದಾಣದ ಎದುರು ಆತನನ್ನು ಆಟೋದಿಂದ ಹೊರತಳ್ಳಿ ಆರೋಪಿಗಳು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ವಿಜಯ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹನುಮಂತನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here