Home Uncategorized ಬೆಂಗಳೂರು ವೋಟರ್ ಐಡಿ ಅಕ್ರಮ ಪ್ರಕರಣದ ತನಿಖೆಗಾಗಿ 7 IAS ಅಧಿಕಾರಿಗಳನ್ನು ನೇಮಿಸಿದ ಕೇಂದ್ರ ಚುನಾವಣೆ...

ಬೆಂಗಳೂರು ವೋಟರ್ ಐಡಿ ಅಕ್ರಮ ಪ್ರಕರಣದ ತನಿಖೆಗಾಗಿ 7 IAS ಅಧಿಕಾರಿಗಳನ್ನು ನೇಮಿಸಿದ ಕೇಂದ್ರ ಚುನಾವಣೆ ಆಯೋಗ

41
0

ನವದೆಹಲಿ/ಬೆಂಗಳೂರು:  ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದ್ದು, ಪ್ರಕರಣದಲ್ಲಿ ಐಎಎಸ್‌ ಅಧಿಕಾರಿಗಳೂ ಭಾಗಿಯಾಗಿರುವುದು ದೃಢವಾಗಿದೆ. ಕೇವಲ ಕೆಳಹಂತದ ಅಧಿಕಾರಿಗಳು ಭಾಗಿಯಾಗಿದ್ರು ಎನ್ನಲಾಗುತ್ತಿತ್ತು. ಆದ್ರೆ ಇಬ್ಬರು ಐಎಎಸ್‌ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಭಾಗಿಯಾಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿದ್ದು,  ವೋಟರ್ ಐಡಿ ಅಕ್ರಮದ ಬಗ್ಗೆ ತನಿಖೆಗಾಗಿ ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಿಸಿದೆ.

ವೋಟರ್ ಐಡಿ ಅಕ್ರಮ: ಬಿಬಿಎಂಪಿ ವಿಶೇಷ ಆಯುಕ್ತ, ಬೆಂಗಳೂರು DC ಸಸ್ಪೆಂಡ್ ಮಾಡಿ ತನಿಖೆಗೆ ಆದೇಶಿಸಿದ ಕೇಂದ್ರ ಚುನಾವಣೆ ಆಯೋಗ

ಮತದಾರ ಪಟ್ಟಿಯಿಂದ ತೆಗೆದು ಹಾಕಿರುವುದು, ಸೇರ್ಪಡೆ, ತಿದ್ದುಪಡಿ ಬಗ್ಗೆ ಪೂರ್ಣಪರಿಶೀಲನೆ ಎಂದು ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಕ ಮಾಡಿ ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಿದೆ. ಅದರಲ್ಲೂ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ವಲಯದಲ್ಲಿ ವಿಶೇಷವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನಿಖೆಗೆ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ. ಮಹಾದೇವಪುರ ವಲಯಕ್ಕೆ ಅಜೇಯ್ ನಾಗಭೂಷಣ್ ಹಾಗೂ ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಅವರನ್ನು ನೇಮಿಸಿದೆ.

ಖಾಸಗಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಆದವರ ಬಗ್ಗೆ ಕೂಲಂಕಷವಾಗಿ ಪರಿಶೀಲನೆಗೆ ಆದೇಶಿಸಿದ್ದು, ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ, ಹಾಗೂ ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೂಡಾ ಅಮಾನತು ಮಾಡಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಆದೇಶ ಮಾಡಿದೆ.

LEAVE A REPLY

Please enter your comment!
Please enter your name here