Home Uncategorized ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

23
0

ಪಡುಬಿದ್ರಿ, ಜ.19: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜ.18ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಬಡಾ ಎರ್ಮಾಳಿನ ಮಹಾಬಲ ಎಂದು ಗುರುತಿಸಲಾಗಿದೆ. ಬೈಕ್ ಸವಾರ ವಿನೋದ್ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆಯನ್ನು ದಾಟುತ್ತಿದ್ದ ಮಹಾಬಲ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರ ಹಾಗೂ ಮಹಾಬಲ ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಮಹಾಬಲ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here