ದೆಹಲಿ: ಭಾರತದ ಆರ್ಥಿಕ ತಜ್ಞ ಅಮರ್ತ್ಯ ಸೇನ್ ನಿಧನ ಹೊಂದಿದವರೆಂದ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಆಗಿತ್ತು. ಇದು ಸುಳ್ಳು ಸುದ್ದಿ . ತಮ್ಮ ತಂದೆ ಸತ್ತಿಲ್ಲ, ಬದುಕಿದ್ದಾರೆ ಎಂದು ಅಮರ್ತ್ಯ ಸೇನ್ ಅವರ ಮಗಳೇ ಸ್ವತಃ ಸ್ಪಷ್ಟಪಡಿಸಿದ್ದಾರೆ.
ಇಸ್ರೇಲ್-ಹಮಾಸ್ ಬಿಕ್ಕಟ್ಟು: ಭಾರತವು ಇಸ್ರೇಲ್ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ: ಪ್ರಧಾನಿ ಮೋದಿ ಟ್ವೀಟ್!
ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಸಾವನ್ನಪ್ಪಿದ್ದಾರೆ ಎಂದು ಹಾಲಿ ನೊಬೆಲ್ ಪುರಸ್ಕೃತ ಆರ್ಥಿಕ ತಜ್ಞೆ ಕ್ಲಾಡಿಯಾ ಗೋಲ್ಡಿನ್ ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಷೇರ್ ಮಾಡಲಾಗಿತ್ತು. ಈ ಟ್ವೀಟ್ ಆಧಾರದ ಮೇಲೆ ಬಹುತೇಕ ಮಾಧ್ಯಮಗಳು ಅಮರ್ತ್ಯ ಸೇನ್ ಸಾವಿನ ಸುದ್ದಿಯನ್ನು ವರದಿ ಮಾಡಿದ್ದವು. ಪಿಟಿಐ ಸುದ್ದಿ ಸಂಸ್ಥೆ ಕೂಡ ಇದೇ ಆಧಾರದ ಮೇಲೆ ಟ್ವೀಟ್ ಮಾಡಿತ್ತು. ಆದರೆ, ಮಗಳು ನಂದನಾ ದೇಬ್ ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ
The post ಭಾರತದ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಸತ್ತಿಲ್ಲ, ಇದೊಂದು ಸುಳ್ಳು ಸುದ್ದಿ: ಮಗಳಿಂದ ಸ್ಪಷ್ಟನೆ! appeared first on Ain Live News.