Home Uncategorized ಮಂಡ್ಯ: ಕಡವೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಮಂಡ್ಯ: ಕಡವೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

35
0

ಮಂಡ್ಯ: ಮಳವಳ್ಳಿ ತಾಲೂಕು ಬಸವನ ಬೆಟ್ಟ ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಬಸವನಹಳ್ಳಿಯ ಪ್ರಕಾಶ್ ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಅರಣ್ಯ ಪ್ರದೇಶದಲ್ಲಿ ಇಲಾಖೆ ಸಿಬ್ಬಂದಿ ಗಸ್ತು ಮಾಡುತ್ತಿದ್ದಾಗ ರಸ್ತೆ ಪಕ್ಕ ಬೈಕ್ ನಿಂತಿರುವುದನ್ನು ಗಮನಿಸಿದ್ದಾರೆ. ಅಲ್ಲಿಗೆ ಕಪ್ಪು ಕವರ್ ಹಿಡಿದು ಬಂದ ಪ್ರಕಾಶ್ ಎಂಬ ವ್ಯಕ್ತಿಯನ್ನು ಪರಿಶೀಲಿಸಿದಾಗ ಕಡವೆ ಮಾಂಸ ಪತ್ತೆಯಾಗಿದೆ.

ತಾನು, ಸಿದ್ದಪ್ಪ, ಶಿವರಾಮ, ಕೆಂಪ ಮತ್ತು ಮಹದೇವ ಸೇರಿ ಕಡವೆ ಬೇಟೆಯಾಡಿ ಮಾಂಸವನ್ನು ಹಂಚಿಕೊಂಡಿದ್ದೇವೆ. ನನ್ನ ಪಾಲಿನ ಮಾಂಸ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಬಂಧಿತ ಪ್ರಕಾಶ್ ಮಾಹಿತಿ ನೀಡಿದ್ದಾನೆ.

ಬಂಧಿತನಿಂದ ಕಡವೆ ಚರ್ಮ, ಮಾಂಸ,  ಉರುಳು, ಬೈಕ್ ವಶಪಡಿಸಿಕೊಳ್ಳಲಾಗಿದೆ. ಇತರೆ ಮೂವರು ಆರೋಪಿಗಳು ಪರಾರಿಯಾಗಿದ್ದು ಪತ್ತೆಗೆ ಕ್ರಮವಹಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳಾದ ರವಿ ಬುರ್ಜಿ, ಪ್ರವೀಣ್ ಕುಮಾರ್, ಪ್ರಕಾಶ್, ಸಿದ್ದರಾಮ ಪೂಜಾರಿ, ಮೌನೇಶ್, ಶ್ರೇಯಸ್, ಬಾಲರಾಜ್, ಮಾದಪ್ಪ, ಮಂಜು ಇತರರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here