ತಂದೆಯಿಂದಲೇ ಇಬ್ಬರು ಮಕ್ಕಳ ಕೊಲೆಯಾದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಶ್ರೀರಂಗಪಟ್ಟಣ: ತಂದೆಯಿಂದಲೇ ಇಬ್ಬರು ಮಕ್ಕಳ ಕೊಲೆಯಾದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.
ಅದರ್ಶ್ (4) ಹಾಗೂ ಅಮೂಲ್ಯ (3) ಕೊಲೆಯಾಗಿರುವ ಮಕ್ಕಳು. ಮೋಹನ್ ಕುಮಾರ್ ಎಂಬಾತ, ಸುತ್ತಿಗೆಯಿಂದ ಹೊಡೆದು ಮಕ್ಕಳ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಪತ್ನಿ ಮೇಲೂ ಹಲ್ಲೆ ಮಾಡಿದ್ದಾನೆ. ಕೃತ್ಯಕ್ಕೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ
ಮೂಲತಃ ಗುಲ್ಬರ್ಗದವರಾಗಿರುವ ಮೋಹನ್ ಕುಮಾರ್ ಕುಟುಂಬ ಮರಳಗಾಲದ ವಿರುಪಾಕ್ಷ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಲಕ್ಷ್ಮೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.