ಹಾವೇರಿ;- ಮತದಾರರಿಗೆ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಜೆ.ಪಿ ನಡ್ಡಾ ವಿರುದ್ಧದ ತನಿಖೆಗೆ ಧಾರವಾಡದ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ.
ಬಿಜೆಪಿಗೆ ಮತ ನೀಡಿ ಮತ್ತು ನರೇಂದ್ರ ಮೋದಿಜಿಯವರ ಒಲವು ಪಡೆಯಿರಿ, ಕರ್ನಾಟಕವು ಮೋದಿಯವರ ಆಶೀರ್ವಾದ ಹೊಂದಿದೆ. ಅದರಿಂದ ವಂಚಿತವಾಗದಂತೆ ನೋಡಿಕೊಳ್ಳಿ’ ಎಂದು ನಡ್ಡಾ ಅವರು ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು. ಇದು ಜನಪ್ರತಿನಿಧಿ ಕಾಯ್ದೆಯ ಪ್ರಕಾರ, ಶಿಗ್ಗಾಂವಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಿಸಲಾಗಿತ್ತು.
ಬಿಜೆಪಿ ಪರವಾಗಿ ನ್ಯಾಯವಾದಿ ಮತ್ತು ಕಾನೂನು ಪ್ರಕೋಷ್ಠದ ವಿನೋದ್ ಕುಮಾರ್ ಅವರು ಈ ಕೇಸು ರದ್ದು ಮಾಡಲು ಕೋರಿ ಹೈಕೋರ್ಟಿನ ಧಾರವಾಡ ಪೀಠದ ಮುಂದೆ ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಈ ಪ್ರಕರಣದ ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿದ್ದಾಗಿ ವಿನೋದ್ ಕುಮಾರ್ ಅವರು ತಿಳಿಸಿದ್ದಾರೆ
The post ಮತದಾರರಿಗೆ ಆಮಿಷ, ಜೆಪಿ ನಡ್ಡಾ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್ appeared first on Ain Live News.