Home Uncategorized ಮತಪ್ರಮಾಣ ಏರಿಕೆಗೆ ಕ್ರಮ: ಐಟಿ-ಬಿಟಿ ಸಂಸ್ಥೆಗಳೊಂದಿಗೆ ಮಾತುಕತೆ, ಜಾಗೃತಿ ಜಾಥಾ ನಡೆಸಿದ ಬಿಬಿಎಂಪಿ

ಮತಪ್ರಮಾಣ ಏರಿಕೆಗೆ ಕ್ರಮ: ಐಟಿ-ಬಿಟಿ ಸಂಸ್ಥೆಗಳೊಂದಿಗೆ ಮಾತುಕತೆ, ಜಾಗೃತಿ ಜಾಥಾ ನಡೆಸಿದ ಬಿಬಿಎಂಪಿ

38
0

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತಪ್ರಮಾಣ ಏರಿಕೆ ಮಾಡಲು ಕ್ರಮಕೈಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಮಂಗಳವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಜಾಗೃತಿ ಜಾಥಾವನ್ನು ನಡೆಸಿತು. ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತಪ್ರಮಾಣ ಏರಿಕೆ ಮಾಡಲು ಕ್ರಮಕೈಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಮಂಗಳವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಜಾಗೃತಿ ಜಾಥಾವನ್ನು ನಡೆಸಿತು.

ಸಿದ್ದಯ್ಯ ಪುರಾಣಿಕ್ ರಸ್ತೆ, ಬಸವೇಶ್ವರನಗರದಲ್ಲಿರುವ ಸರ್ಕಾರಿ ಹೊಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಸಹಾಯಕ ಕಾರ್ಯನಿರ್ವಾಹಕ ನಿರ್ದೇಶಕ, ಚುನಾವಣಾ ನೋಡಲ್ ಅಧಿಕಾರಿ ಉಮೇಶ್ ಮಾತನಾಡಿ, ನಗರ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯೂ ತಮ್ಮ ಮತ ಹಕ್ಕು ಚಲಾಯಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ವಾಟ್ಸಾಪ್ ಚುನಾವಣಾ ಜಾಹೀರಾತುಗಳ ಮೇಲೆ ನಿಗಾ ಇಡುವುದು ಕಷ್ಟ: ಬಿಬಿಎಂಪಿ

ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ರಾಜೇಂದ್ರನ್, ಬಿಬಿಎಂಪಿ ಅಧಿಕಾರಿಗಳು, ಯುನಾನಿ ಕಾಲೇಜು ಪ್ರಾಂಶುಪಾಲೆ ಮಂಜುಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಬಿಬಿಎಂಪಿಯು ಪೂರ್ವ ವಲಯದಲ್ಲಿರುವ ಎಂಬೆಸಿ ಮಾನ್ಯತಾ ಬ್ಯುಸಿನೆಸ್ ಪಾರ್ಕ್‌ನಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (SVEEP) ಅಭಿಯಾನವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಮತ್ತು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಮಾತನಾಡಿ, ಮತದಾನದ ಮಹತ್ವದ ಬಗ್ಗೆ IT/BT ಕಂಪನಿಗಳಿಗೆ ವಿವರಿಸಿದರು.

ಭಾರತೀಯ ಸಂವಿಧಾನವು ಈ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ಮತದಾನದ ಹಕ್ಕು ನೀಡಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here