Home Uncategorized ಮುಂಗಾರು ಆರಂಭ: ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ, ಮೋಡವನ್ನು ದಿಟ್ಟಿಸುತ್ತಿದ್ದ ರೈತರಲ್ಲಿ ಹರ್ಷ

ಮುಂಗಾರು ಆರಂಭ: ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ, ಮೋಡವನ್ನು ದಿಟ್ಟಿಸುತ್ತಿದ್ದ ರೈತರಲ್ಲಿ ಹರ್ಷ

28
0

ವಿಳಂಬದ ನಂತರ ಕೊನೆಗೂ ಮುಂಗಾರು ಆರಂಭವಾಗಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಹಲವು ಭಾಗಗಳು ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಭರವಸೆ ಮೂಡಿಸಿದೆ. ಬೆಂಗಳೂರು: ವಿಳಂಬದ ನಂತರ ಕೊನೆಗೂ ಮುಂಗಾರು ಆರಂಭವಾಗಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಹಲವು ಭಾಗಗಳು ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಭರವಸೆ ಮೂಡಿಸಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಲವು ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ದಕ್ಷಿಣ ಕಾಶಿ ಎಂದೂ ಕರೆಯಲ್ಪಡುವ ಸೋಮೇಶ್ವರನ ಆವಾಸಸ್ಥಾನವಾದ ಸೊಗಲದಲ್ಲಿನ ಜಲಪಾತವು ಈ ಪ್ರದೇಶದಲ್ಲಿ ಭಾರಿ ಮಳೆಯ ನಂತರ ಜೀವಂತವಾಗಿದೆ. ಮುರಗೋಡು, ಕರಿಮನಿ, ಹೊಸೂರಿನಲ್ಲೂ ಉತ್ತಮ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಈ ಬಾರಿಯ ಮೊದಲ ಮಳೆಯಾಗಿದೆ. ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ ರೈತರ ಮೊಗದಲ್ಲಿ ಮಧ್ಯಾಹ್ನದ ವೇಳೆಯಲ್ಲಿ ಸುರಿದ ಮಳೆ ಸಂತಸ ತಂದಿದೆ.

ಗುರುವಾರ ಎಡೆಬಿಡದೆ ಸುರಿದ ಮಳೆಗೆ ಹರಪನಹಳ್ಳಿ ತಾಲ್ಲೂಕಿನ ತೇಗದ ಹಳ್ಳ ಸೇರಿದಂತೆ ಹಲವು ಹೊಳೆಗಳು ಪೂರ್ಣ ಪ್ರಮಾಣದಲ್ಲಿ ತುಂಬಿ ಹರಿಯುತ್ತಿವೆ. ಹೊಳೆಗಳು ತುಂಬಿ ತುಳುಕುತ್ತಿದ್ದು, ತಾಲ್ಲೂಕಿನಲ್ಲಿ ಅಪಾರ ಪ್ರಮಾಣದ ಕೃಷಿ ಭೂಮಿ ಜಲಾವೃತಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಗದಗ ಮತ್ತು ದಾವಣಗೆರೆ ಜಿಲ್ಲೆಗಳ ಕೆಲವೆಡೆಯೂ ಸಾಧಾರಣ ಮಳೆಯಾಗಿದೆ.

ತುಮಕೂರು ಜಿಲ್ಲೆಯ ಬೋರನಕಣಿವೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 80.4 ಮಿಮೀ ಮಳೆ ದಾಖಲಾಗಿದೆ. ತುಮಕೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ, ಶಿರಾ, ಕೊರಟಗೆರೆ ತಾಲೂಕುಗಳಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದೆ.

ಶ್ರೀನಿವಾಸಪುರ, ಗೌರಿಬಿದನೂರು ಸೇರಿದಂತೆ ಅವಿಭಜಿತ ಕೋಲಾರ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ತುಂತುರು ಮಳೆಯಾಗಿದೆ.

ಇದನ್ನೂ ಓದಿ: ಬಿಪರ್‌ಜಾಯ್ ಎಫೆಕ್ಟ್; ರಾಜ್ಯದಲ್ಲಿ ಶೇ 71ರಷ್ಟು ಮಳೆ ಕೊರತೆ, ಜೂನ್ 21ರಿಂದ ಎರಡು ವಾರ ಭಾರಿ ಮಳೆ ಸಾಧ್ಯತೆ!

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಮತ್ತು ಬಲ್ಲಮಾವಟಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದರೆ, ಗುಡ್ಡಗಾಡು ಜಿಲ್ಲೆಯ ಇತರ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.

LEAVE A REPLY

Please enter your comment!
Please enter your name here