Home Uncategorized ಮೆಟ್ರೋ ಪಿಲ್ಲರ್ ದುರಂತ: ಸುರಕ್ಷತಾ ಕ್ರಮವಿಲ್ಲದೆ ಕಾಮಗಾರಿ ನಡೆಸಿದ್ದೇ ದುರಂತಕ್ಕೆ ಕಾರಣ- ಮೃತ ತೇಜಸ್ವಿನಿ ಮಾವ

ಮೆಟ್ರೋ ಪಿಲ್ಲರ್ ದುರಂತ: ಸುರಕ್ಷತಾ ಕ್ರಮವಿಲ್ಲದೆ ಕಾಮಗಾರಿ ನಡೆಸಿದ್ದೇ ದುರಂತಕ್ಕೆ ಕಾರಣ- ಮೃತ ತೇಜಸ್ವಿನಿ ಮಾವ

30
0

ಸುರಕ್ಷತಾ ಕ್ರಮ ತೆಗೆದುಕೊಳ್ಳದೆ ಮೆಟ್ರೋ ಕಾಮಗಾರಿ ನಡೆಸಿದ್ದರಿಂದಲೇ ಈ ದುರಂತ ಸಂಭವಿಸಿದೆ ಎಂದು ಮೆಟ್ರೋ ಪಿಲ್ಲರ್ ಕುಸಿದ ದುರಂತದಲ್ಲಿ ಮೃತಪಟ್ಟ ತೇಜಸ್ವಿನಿಯವರ ಮಾವ ವಿಜಯ್ ಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಸುರಕ್ಷತಾ ಕ್ರಮ ತೆಗೆದುಕೊಳ್ಳದೆ ಮೆಟ್ರೋ ಕಾಮಗಾರಿ ನಡೆಸಿದ್ದರಿಂದಲೇ ಈ ದುರಂತ ಸಂಭವಿಸಿದೆ ಎಂದು ಮೆಟ್ರೋ ಪಿಲ್ಲರ್ ಕುಸಿದ ದುರಂತದಲ್ಲಿ ಮೃತಪಟ್ಟ ತೇಜಸ್ವಿನಿಯವರ ಮಾವ ವಿಜಯ್ ಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಚ್‌ಬಿಆರ್ ಲೇಔಟ್‌ನ ಹೊರ ವರ್ತುಲ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಬಿದ್ದ ಪರಿಣಾಮ ವಿಜಯ್ ಕುಮಾರ್ ಅವರು ತಮ್ಮ ಸೊಸೆ ಮತ್ತು 2.6 ವರ್ಷದ ಮೊಮ್ಮಗನನ್ನು ಕಳೆದುಕೊಂಡಿದ್ದಾರೆ.

ಮೆಟ್ರೋ ಪಿಲ್ಲರ್ ಕುಸಿತ ದುರಂತದಿಂದಲೇ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು ಎಂಬುದು ನನಗೆ ತಿಳಿದಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮ್ಮ ಕುಟುಂಬದ ಜೀವಗಳು ಹೋಗಿವೆ. ನಮ್ಮ ಕುಟುಂಬ ಅನುಭವಿಸಿದ ನೋವು ಇನ್ನಾವುದೇ ಕುಟುಂಬಕ್ಕೂ ಎದುರಾಗಬಾರದು, ಸರ್ಕಾರ ಕೂಡಲೇ ಬಿಎಂಆರ್’ಸಿಎಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಸುರಕ್ಷತಾ ಕ್ರಮ ತೆಗೆದುಕೊಳ್ಳದೆ ಮೆಟ್ರೋ ಕಾಮಗಾರಿ ನಡೆಸಿದ್ದರಿಂದಲೇ ಈ ದುರಂತ ಸಂಭವಿಸಿದೆ. ಬೇರೆಯವರ ನಿರ್ಲಕ್ಷ್ಯಕ್ಕೆ ನಮ್ಮ ಕುಟುಂಬದ ಸದಸ್ಯರು ಬಲಿಯಾಗಿದ್ದಾರೆ. ನಮ್ಮ ಸೊಸೆ ಹಾಗೂ ಮೊಮ್ಮಗನ ಸಾವಿಗೆ ಬಿಎಂಆರ್’ಸಿಎಸ್ ನಿರ್ಲಕ್ಷ್ಯವೇ ಕಾರಣ. ಈಗ ನಮಗೆ ಸರ್ಕಾರ ರೂ.20 ಲಕ್ಷ ಪರಿಹಾರ ಕೊಟ್ಟರೆ ಹೋದ ಜೀವಗಳು ಮತ್ತೆ ಸಿಗುತ್ತವೆಯೇ? ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ವಿಸ್ಮಿತಾಳಂತೆಯೇ ವಿಹಾನ್ ನನ್ನನ್ನು ಬಹಳ ಹಚ್ಚಿಕೊಂಡಿದ್ದ. ನಮ್ಮನ್ನು ನೋವನ್ನು ಯಾರಿಗೆ ಹೇಳುವುದು ಎಂದು ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here