Home Uncategorized ಮೆಟ್ರೋ ಪ್ರಯಾಣಿಕರ ಗಮನಕ್ಕೆ: 1 ತಿಂಗಳವರೆಗೆ ಪ್ರತಿದಿನ 2 ಗಂಟೆಗಳ ಕಾಲ ಈ ಮಾರ್ಗದ ರೈಲು...

ಮೆಟ್ರೋ ಪ್ರಯಾಣಿಕರ ಗಮನಕ್ಕೆ: 1 ತಿಂಗಳವರೆಗೆ ಪ್ರತಿದಿನ 2 ಗಂಟೆಗಳ ಕಾಲ ಈ ಮಾರ್ಗದ ರೈಲು ಸಂಚಾರ ಸ್ಥಗಿತ!

21
0

ನಮ್ಮ ಮೆಟ್ರೋ ಸೇವೆಯಲ್ಲಿ ಒಂದು ತಿಂಗಳ ಕಾಲ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸೂಚನೆ ನೀಡಿದೆ. ಬೆಂಗಳೂರು: ನಮ್ಮ ಮೆಟ್ರೋ ಸೇವೆಯಲ್ಲಿ ಒಂದು ತಿಂಗಳ ಕಾಲ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸೂಚನೆ ನೀಡಿದೆ.

ಮೆಟ್ರೋ ರೈಲು ನಿಗಮವು ಜುಲೈ 10 ರಿಂದ ಆಗಷ್ಟ್​ 09ರ ವರೆಗೆ ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳನ್ನು ಸಂಪರ್ಕಿಸುವ ಸಿಗ್ನಲಿಂಗ್​ ಹಾಗೂ ಇತರ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ಬೆಳಗ್ಗೆ 5:00 ರಿಂದ 7:00 ಘಂಟೆವರೆಗೂ ಈ ಮಾರ್ಗದ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸುತ್ತಿದೆ.

ಬೈಯಪ್ಪನಹಳ್ಳಿ-ಸ್ವಾಮಿ ವಿವೇಕಾನಂದ ರಸ್ತೆ, ಕೃಷ್ಣರಾಜಪುರ-ವೈಟ್​ಫೀಲ್ಡ್​(ಕಾಡುಗೋಡಿ) ನಡುವಿನ ರೈಲು ಸಂಚಾರವನ್ನು ಬೆಳಗ್ಗೆ 5 ರಿಂದ 7 ಘಂಟೆವರೆಗೂ ಸ್ಥಗಿತಗೊಳಿಸುತ್ತಿದೆ.

ಬೆಳಗ್ಗೆ 7 ಘಂಟೆಯ ನಂತರ ಬೈಯಪ್ಪನಹಳ್ಳಿ-ಕೆಂಗೇರಿ, ಕೃಷ್ಣರಾಜಪುರ-ವೈಟ್​ಫೀಲ್ಡ್​(ಕಾಡುಗೋಡಿ) ನಡುವಿನ ರೈಲು ಸಂಚಾರವು ಎಂದಿನಂತೆ ರಾತ್ರಿ 11 ಘಂಟೆವರೆಗೆ ಇರಲಿದೆ.

ಹಸಿರು ಬಣ್ಣದ ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್’ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here