ಮೈಸೂರು: ಜಿಲ್ಲೆಯಲ್ಲಿ ಚಿರತೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಟಿ. ನರಸಿಪುರ ಮತ್ತು ನಂಜನಗೂಡು (Nanjangud) ತಾಲೂಕಿನ ಜನರು ಭಯದಲ್ಲೇ ಓಡಾಡುವಂತಾಗಿದೆ. ಚಿರತೆ ಭಯ ಕಡಮೆಯಾಗುವ ಮುನ್ನವೇ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದ ರೈತರೊಬ್ಬರ ಮೇಲೆ ಹುಲಿ (Tiger) ದಾಳಿ ಮಾಡಿದೆ. ಬಳ್ಳೂರುಹುಂಡಿ ಗ್ರಾಮದ ದಾಸಯ್ಯ ಎಂಬುವರು ಹಸು ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿದೆ. ಇದರಿಂದ ದಾಸಯ್ಯ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲಿ ದಾಳಿಯಿಂದ ಆತಂಕಕ್ಕೆ ಒಳಗಾದ ಗ್ರಾಮಸ್ಥರು, ಭಯದಲ್ಲೇ ಓಡಾಡುವಂತಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ