Home ಕರ್ನಾಟಕ ಮೈಸೂರು | ಸ್ಟೇರಿಂಗ್ ತುಂಡಾಗಿ ಬತ್ತದ ಗದ್ದೆಗೆ ನುಗ್ಗಿದ ಸಾರಿಗೆ ಬಸ್ : 30 ಕ್ಕೂ...

ಮೈಸೂರು | ಸ್ಟೇರಿಂಗ್ ತುಂಡಾಗಿ ಬತ್ತದ ಗದ್ದೆಗೆ ನುಗ್ಗಿದ ಸಾರಿಗೆ ಬಸ್ : 30 ಕ್ಕೂ ಹೆಚ್ಚು ಮಂದಿಗೆ ಗಾಯ

19
0

ಮೈಸೂರು : ಸ್ಟೇರಿಂಗ್ ತುಂಡಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ವೊಂದು ಭತ್ತದ ಗದ್ದೆಗೆ ಬಿದ್ದಿರುವ ಘಟನೆ ಕೆ.ಆರ್. ನಗರದ ಶ್ರೀರಾಂಪುರ ಬಳಿ ನಡೆದಿದ್ದು, 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಸಾಲಿಗ್ರಾಮದಿಂದ ಮೈಸೂರಿಗೆ ಬಸ್ ತೆರಳುತ್ತಿತ್ತು. ಬಸ್ಸು ಭತ್ತದ ಗದ್ದೆಗೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಹಲವರ ಕೈ ಕಾಲುಗಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಬಸ್ಸು ಹಳ್ಳಕ್ಕೆ ಬಿದ್ದ ಕೂಡಲೇ  ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here