ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಬಹಳ ಜನರು ಬಳಲುತ್ತಿದ್ದಾರೆ. ಮೊಬೈಲ್ ಬಂದ ನಂತರದಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ಹಲವು ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರ ಎಂದು ಆತ್ಮಹತ್ಯೆಯನ್ನು ಮಾಡಿ ಕೊಳ್ಳುತ್ತಿದ್ದಾರೆ. ಅಂತವರಿಗೆ ಸರಿಯಾದ ಮನೋ ವೈದ್ಯರ ಸಮಾಲೋಚನೆ ಅಗತ್ಯವಿದೆ ಎಂದು ಉಡುಪಿ ಡಾ.ಎ.ವಿ.ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಮನೋ ವೈದ್ಯ ಡಾ.ಮಾನಸ್ ಹೇಳಿದ್ದಾರೆ.
ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ವತಿಯಿಂದ ಉಡುಪಿಯ ಡಾನ್ ಬಾಸ್ಕೋ ಹಾಲ್ನಲ್ಲಿ ಶುಕ್ರವಾರ ಆಯೋಜಿಸ ಲಾದ ಸುದೃಢ ಕುಟುಂಬ, ಸುಭದ್ರ ಸಮಾಜ ಎಂಬ ವಿಷಯದ ಕುರಿತ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಮುಖ್ಯ ಅತಿಥಿಯಾಗಿ ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಘವೇಂದ್ರ ಮಾತನಾಡಿ, ಯುವಕರು ಹೆಚ್ಚಾಗಿ ಮದ್ಯ, ಮಾದಕ ದ್ರವ್ಯಕ್ಕೆ ಬಲಿಯಾಗುತ್ತಿದ್ದು ಪೋಷಕರು ಎಚ್ಚೆತ್ತುಕೊಳ್ಳದಿದ್ದರೆ ಸಮಾಜ ಇನ್ನಷ್ಟು ಹಾಳಾಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಸೈಬರ್ ಕ್ರೈಮ್, ಆನ್ಲೈನ್ ಗೇಮಿಂಗ್ಗೆ ಒಳಗಾಗಿ ಪ್ರತಿ ದಿನ ಲಕ್ಷಾಂತರ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ನಾವುಗಳು ಜಾಗೃತರಾಗಬೇಕು ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಕುಂಞಿ ಮಾತನಾಡಿ, ಜಗತ್ತಿನ ಎಲ್ಲಾ ಧರ್ಮ ಗಳಲ್ಲಿಯೂ ಕೌಟುಂಬಿಕ ವ್ಯವಸ್ಥಗೆ ಬಹಳ ಪ್ರಾಮುಖ್ಯತೆ ಇದೆ. ಎಲ್ಲೂ ಸಿಗದಂತಹ ಸೇವೆಗಳು ಕುಟುಂಬಲ್ಲಿ ನಮಗೆ ಸಿಗುತ್ತವೆ. ಈ ಸಮಾಜ ಉಳಿಯ ಬೇಕಾದರೆ ಕುಟುಂಬ ಇರಬೇಕು. ಕುಟುಂಬ ಇಲ್ಲದಿದ್ದರೆ ಸಮಾಜ ಉಳಿಯುವು ದಿಲ್ಲ. ಕುಟುಂಬ ಸಂಬಂಧವನ್ನು ಹಾಳು ಮಾಡಿದವನನ್ನು ಪ್ರವಾದಿ ಮುಹಮ್ಮದರು ಮಸೀದಿಯಿಂದಲೇ ಓಡಿಸಿದ್ದರು ಎಂದು ಹೇಳಿದರು.
ಸುಗಮ್ಯ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷ ಜನೇಟ್ ಬರ್ಬೋಝ ಮಾತನಾಡಿದರು. ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಉಪನ್ಯಾಸಕ ಕೆ. ಸುಕುಮಾರ್ ಶೆಟ್ಟಿ, ದ್ವಿತೀಯ ಬಹುಮಾನ ಪಡೆದ ಯಶಸ್ವಿ ಟುಟೋರಿಯಲ್ ಪಿಯು ಕಾಲೇಜಿನ ಸೂರಜ್ ಮತ್ತು ತೃತಿಯ ಬಹುಮಾನ ಪಡೆದ ಪ್ಲವರ್ ಆಫ್ ಪ್ಯಾರಡೈಸ್ನ ಉಪನ್ಯಾಸಕಿ ಮರ್ಸೆಲ್ಲ ಡಿಸೋಜಾ ಅವರನ್ನು ಗೌರವಿಸ ಲಾಯಿತು.
ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಘಟಕದ ಅಧ್ಯಕ್ಷ ನಿಸಾರ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ರಯೀಸ್ ಅಹಮದ್ ವಂದಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ವಾಜಿದಾ ತಬಸ್ಸುಮ್ ಉಪಸ್ಥಿತರಿದ್ದರು. ಜಲಾಲುದ್ದಿನ್ ಹಿಂದ್ ಕಾರ್ಯಕ್ರಮ ನಿರೂಪಿಸಿದರು.