Home ಕರ್ನಾಟಕ ಯಾರೂ ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡಲಿದೆ: ಜೆಡಿಎಸ್ ಕಾರ್ಯಕರ್ತರಿಗೆ ಎಚ್.ಡಿ. ರೇವಣ್ಣ ಭರವಸೆ

ಯಾರೂ ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡಲಿದೆ: ಜೆಡಿಎಸ್ ಕಾರ್ಯಕರ್ತರಿಗೆ ಎಚ್.ಡಿ. ರೇವಣ್ಣ ಭರವಸೆ

40
0

ಹಾಸನ: ಯಾರೂ ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ನಮ್ಮ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.

ನಗರದ ಕುವೆಂಪು ಬಡಾವಣೆಯಲ್ಲಿರುವ ಡಿ.ಟಿ.ಪರಮೇಶ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡುವುದಿಲ್ಲ ಎಂದರು.

‘48 ಗಂಟೆಗಳಲ್ಲಿ ಪ್ರಜ್ವಲ್ ರೇವಣ್ಣ ಬಾ’ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಎಚ್.ಡಿ.ರೇವಣ್ಣ , ಕೋರ್ಟ್‌ನಲ್ಲಿ ಕೇಸ್ ಇದ್ದಾಗ ನಾನು ಮಾತನಾಡುವುದಿಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಮೂಲ ಕಾರಣ ಯಾರಿದ್ದಾರೆ ಅವರನ್ನು ಬಂಧಿಸಲಿ ಎಂದರು.

ಸುದ್ದಿಗೋಷ್ಠಿಯಲ್ಲಿ ಹಾಸನ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್, ಅರಕಲಗೂಡು ಶಾಸಕ ಎ.ಮಂಜು.ಸ್ವರೂಪ ಪ್ರಕಾಶ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಿವೇಕಾನಂದ, ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here