Home ಕರ್ನಾಟಕ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಮಾಡುವುದಿಲ್ಲ : ಜೆ.ಸಿ.ಮಾಧುಸ್ವಾಮಿ

ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಮಾಡುವುದಿಲ್ಲ : ಜೆ.ಸಿ.ಮಾಧುಸ್ವಾಮಿ

25
0

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನನಗೆ ಟಿಕೆಟ್ ಕೊಡಿಸುವ ಭರವಸೆ ನೀಡಿದ ಬಿ.ಎಸ್. ಯಡಿಯೂರಪ್ಪ ನನ್ನನ್ನು ಬಲಿಕೊಟ್ಟರು ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಯ ಪರ ಪ್ರಚಾರ ಮಾಡುವುದಿಲ್ಲ. ಅಪ್ಪ ಮಕ್ಕಳಿಗೆ ಸ್ವಹಿತಾಸಕ್ತಿಯೇ ಮುಖ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಭರವಸೆ ನೀಡಿದ ಮೇಲೆಯೇ ನಾನು ಕೂಡ ತುಮಕೂರು ಲೋಕಸಭಾ ಆಕಾಂಕ್ಷಿ ಎಂದು ಹೇಳಿದ್ದೆ. ಆದರೆ ಯಡಿಯೂರಪ್ಪ ನನ್ನನ್ನು ನಡುನೀರಿನಲ್ಲಿ ಕೈಬಿಟ್ಟರು. ಯಡಿಯೂರಪ್ಪ ಅವರು ಎರಡು ಮೂರು ಸಲ ಕರೆಸಿಕೊಂಡು ಚುನಾವಣೆಗೆ ಸ್ಪರ್ಧೆ ಮಾಡುವಂತೆ ನನಗೆ ಹೇಳಿದ್ದರು ಎಂದರು.

ನಿನಗೆ ಬಿ ಫಾರ್ಮ್ ತಂದು ಕೊಡುವ ಜವಾಬ್ದಾರಿ ನನ್ನದೇ ಎಂದು ಯಡಿಯೂರಪ್ಪ ಹೇಳಿದ್ದರು. ನಾನು ದಿಲ್ಲಿಗೆ ಹೋಗುವುದಾಗಿ ಹೇಳಿದೆ. ಅದಕ್ಕೆ ನೀನು ಯಾಕಪ್ಪ ಹೋಗುತ್ತೀಯಾ, ಹೋಗುವುದು ಬೇಡ ಎಂದಿದ್ದರು. ನಾನು ಅದಕ್ಕೆ ಮಾಧ್ಯಮಗಳ ಮುಂದೆ ದೃಢವಾಗಿ ಹೇಳುತ್ತಿದ್ದೆ. ಚುನಾವಣಾ ಕಾವು ಏರಲಿ,ಚುನಾವಣೆ ದಿನಾಂಕ ಗೊತ್ತಾದ ಮೇಲೆ ಸಭೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ವಿ.ಸೋಮಣ್ಣ ಅವರ ಪರವಾಗಿ ಪ್ರಚಾರ ಮಾಡುವುದಿಲ್ಲ

ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ವಿ.ಸೋಮಣ್ಣ ಅವರ ಪರವಾಗಿ ಪ್ರಚಾರ ಮಾಡುವುದಿಲ್ಲ. ಈ ವಿಷಯವನ್ನು ಯಡಿಯೂರಪ್ಪ ಅವರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ಅಷ್ಟೇ ಅಲ್ಲ, ಹೊರಗಿನವರಿಗೆ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಪ್ರಚಾರ ಮಾಡುತ್ತಿರಲಿಲ್ಲ. ಈ ಜಿಲ್ಲೆಯಲ್ಲಿ ಯಾರಿಗೆ ಕೊಟ್ಟಿದ್ದರೂ ನಾನು ಪ್ರಚಾರ ಮಾಡುತ್ತಿದ್ದೆ. ನನ್ನನ್ನು ನಂಬಿಕೊಂಡಿರುವವರನ್ನು ಸಹ ಜೊತೆಗೆ ಕರೆದುಕೊಂಡು ಹೋಗಬೇಕಲ್ಲ ಎಂದ ಮಾಧುಸ್ವಾಮಿ, ನಮ್ಮ ಕಾರ್ಯಕರ್ತರು ತಟಸ್ಥವಾಗಿ ಇರೋಣ ಎಂದರೆ ತಟಸ್ಥವಾಗಿ ಇರುತ್ತೇನೆ. ಇಲ್ಲ ನಮಗೆ ಅನ್ಯಾಯ ಮಾಡಿದವರಿಗೆ ತಕ್ಕ ಉತ್ತರ ಕೊಡಬೇಕು ಎಂದರೆ ಅದನ್ನು ಮಾಡುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.

LEAVE A REPLY

Please enter your comment!
Please enter your name here