Home ಕರ್ನಾಟಕ ಯುಪಿನಲ್ಲಿ ನಮ್ಮ ಪೊಲೀಸರ ತಪ್ಪಿಲ್ಲ: ಡಾ.ಜಿ.ಪರಮೇಶ್ವರ್

ಯುಪಿನಲ್ಲಿ ನಮ್ಮ ಪೊಲೀಸರ ತಪ್ಪಿಲ್ಲ: ಡಾ.ಜಿ.ಪರಮೇಶ್ವರ್

44
0

ಬೆಂಗಳೂರು : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ನೋಟಿಸ್ ನೀಡಲು ತೆರಳಿದ್ದ ಹೈಗ್ರೌಂಡ್ ಠಾಣೆ ಪೊಲೀಸರಿಗೆ ಉತ್ತರ ಪ್ರದೇಶದ ಪೊಲೀಸರು ಅಡ್ಡಿಪಡಿಸಿರುವ ಕುರಿತು ನಮ್ಮ ಪೊಲೀಸರ ತಪ್ಪಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಎಕ್ಸ್ ಖಾತೆಯಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ನೋಟಿಸ್ ನೀಡಲು ತೆರಳಿದ್ದ ಹೈಗ್ರೌಂಡ್ ಠಾಣೆ ಪೊಲೀಸರಿಗೆ ಅಡ್ಡಿಪಡಿಸಿರುವುದು ಗೊತ್ತಾಗಿದೆ. ಆದರೆ, ಉತ್ತರ ಪ್ರದೇಶದ ನೋಯ್ಡಾಗೆ ಮಫ್ತಿಯಲ್ಲಿ ನಮ್ಮ ಪೊಲೀಸರು ಹೋಗಿದ್ದರು. ಅಲ್ಲಿನ ಪೊಲೀಸರಿಗೆ ಮುಂಚಿತವಾಗಿ ತಿಳಿಸಬೇಕಿತ್ತು. ಅಲ್ಲಿಗೆ ಹೋದ ನಂತರ ತಿಳಿಸಿದ್ದಾರೆ ಎಂದರು.

ಅಲ್ಲದೆ, ಅಲ್ಲಿನ ಪೊಲೀಸರ ಸಹಾಯ ಪಡೆದು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗದೇ ಇದ್ದರೆ, ವಾರಂಟ್ ಜಾರಿ ಮಾಡಿ ಬಂಧಿಸುತ್ತಾರೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here