Home Uncategorized ಯುವನಿಧಿ ಯೋಜನೆಗೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ

ಯುವನಿಧಿ ಯೋಜನೆಗೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ

18
0

ಉಡುಪಿ: ರಾಜ್ಯ ಸರಕಾರದ ಮಹತ್ವದ ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, 2022-23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಪದವಿ ಪಡೆದವರು ಸೇವಾ ಸಿಂಧು ಮೂಲಕ ಜಾಲತಾಣದಲ್ಲಿ ಅರ್ಜಿ ಸಲ್ಲಿಸಿ ಇದರ ಲಾಭ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಬುಧವಾರ ವರ್ಚುವಲ್ ಮೂಲಕ ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಯನ್ನು ಅನುಷ್ಠಾನಗೊಳಿಸುವ ಕುರಿತು ಏರ್ಪಡಿಸ ಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತರಲಾಗಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು ಜಿಲ್ಲೆಯ ಅರ್ಹ ನಿರುದ್ಯೋಗಿ ಪದವೀಧರರು ಸೇವಾ ಸಿಂಧು ಪೋರ್ಟಲ್‌ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಯೋಜನೆಗೆ ಜನವರಿ 12ರ ಯುವ ದಿನಾಚರಣೆಯಂದು ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ಹಣ ವರ್ಗವಣೆ ಮಾಡಲಿದ್ದಾರೆ ಎಂದರು.

ಯುವನಿಧಿಗೆ ಅರ್ಜಿ ಸಲ್ಲಿಸುವಾಗ ಸೇವಾಸಿಂಧು ಪೋರ್ಟಲ್‌ನಲ್ಲಿ ನ್ಯಾಷನಲ್ ಅಕಾಡೆಮಿಕ್ ಡೆಪೊಸೆಟರಿಯ ಲಿಂಕ್ ಅನ್ನು ಬಳಕೆ ಮಾಡುವು ದರೊಂದಿಗೆ ಸರಳವಾಗಿ ಅರ್ಜಿ ಸಲ್ಲಿಸಲು ಅನುಕೂಲವಾಗಲಿದೆ. ಇದನ್ನು ಪ್ರತಿಯೊಬ್ಬರೂ ಬಳಕೆ ಮಾಡಬಹುದು ಎಂದ ಅವರು, ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್‌ಗೆ ನ್ಯಾಡ್ ಪೋರ್ಟಲ್‌ನಲ್ಲಿ ಬಿಟ್ಟುಹೋಗಿರುವ ವಿದ್ಯಾರ್ಥಿ ಗಳ ಶೈಕ್ಷಣಿಕ ವಿವರವನ್ನು ನೋಂದಾಯಿಸಲು ಪತ್ರ ಬರೆಯುದಾಗಿ ತಿಳಿಸಿದರು.

2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾಗಿ ಸರಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದದೆ ಇರುವ ರಾಜ್ಯದಲ್ಲಿ ವಾಸವಾಗಿರುವವರು ತಮ್ಮ ಎಸೆಸೆಲ್ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಅಂಕಪಟ್ಟಿ, ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಲಂದರ್ ಖಾನ್, ಉಡುಪಿ ಲೀಡ್ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here