ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗೆ ಪುಷ್ಪನಮನ ಸಲ್ಲಿಸಿದರು. ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗೆ ಪುಷ್ಪನಮನ ಸಲ್ಲಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ನಮನ ಸಲ್ಲಿಸಿದರು.
ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ, ಭಾರತದ ಡಿಜಿಟಲ್ ಕ್ರಾಂತಿಯ ಹರಿಕಾರ,
ದೇಶದ ಐಕ್ಯತೆ – ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ,
ಮಾಜಿ ಪ್ರಧಾನಿ, ಭಾರತ ರತ್ನ ‘ರಾಜೀವ್ ಗಾಂಧಿ’ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ. pic.twitter.com/wYRqgOrXM6
— Karnataka Congress (@INCKarnataka) May 21, 2023
ಇದನ್ನೂ ಓದಿ: 5 ಗ್ಯಾರಂಟಿ ಜಾರಿಗೆ ಹಣದ ಮೂಲ ತಿಳಿಸಿ: ರಾಜ್ಯ ಕಾಂಗ್ರೆಸ್’ ಅಣ್ಣಾಮಲೈ
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ, ಭಾರತದ ಡಿಜಿಟಲ್ ಕ್ರಾಂತಿಯ ಹರಿಕಾರ, ದೇಶದ ಐಕ್ಯತೆ – ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಮಾಜಿ ಪ್ರಧಾನಿ, ಭಾರತ ರತ್ನ ‘ರಾಜೀವ್ ಗಾಂಧಿ’ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ ಎಂದು ಟ್ವೀಟ್ ಮಾಡಿದೆ.
ಇದನ್ನೂ ಓದಿ: ಹಿಂದಿನ ಸರ್ಕಾರ ‘ಯೂಸ್ ಲೆಸ್’, ಕೇಂದ್ರದಿಂದ ನಮ್ಮ ತೆರಿಗೆ ಪಾಲನ್ನು ಸರಿಯಾಗಿ ಪಡೆಯಲಿಲ್ಲ: ಸಿದ್ದರಾಮಯ್ಯ ವಾಗ್ದಾಳಿ
#WATCH | Karnataka CM Siddaramaiah and Dy CM DK Shivakumar pay tribute to former PM Rajiv Gandhi on his 32nd death anniversary, in the KPCC office in Bengaluru pic.twitter.com/Dfn87Dyeop
— ANI (@ANI) May 21, 2023
ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡರು. 1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. ಅತ್ಯಂತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ರಾಜೀವ್ ಗಾಂಧಿ ಹತ್ಯೆಗೀಡಾದರು.