Home Uncategorized ರಾಜ್ಯದಲ್ಲಿ ಗೋಧ್ರಾ ದುರಂತದಂತಹ ಘಟನೆ ಸೃಷ್ಟಿಗೆ ಯತ್ನ ನಡೆಯಲಿದ್ದು, ಸರಕಾರ ಕಟ್ಟೆಚ್ಚರ ವಹಿಸಬೇಕು: ಬಿ.ಕೆ.ಹರಿಪ್ರಸಾದ್

ರಾಜ್ಯದಲ್ಲಿ ಗೋಧ್ರಾ ದುರಂತದಂತಹ ಘಟನೆ ಸೃಷ್ಟಿಗೆ ಯತ್ನ ನಡೆಯಲಿದ್ದು, ಸರಕಾರ ಕಟ್ಟೆಚ್ಚರ ವಹಿಸಬೇಕು: ಬಿ.ಕೆ.ಹರಿಪ್ರಸಾದ್

22
0

ಬೆಂಗಳೂರು, ಜ.3: ರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ತೆರಳುವವರಿಗೆ ಸರಕಾರ ಸೂಕ್ತ ರಕ್ಷಣೆ ನೀಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಅಪಾಯ ಸಂಭವಿಸುವ ಮಾಹಿತಿ ಇದೆ. ಹಾಗಾಗಿ ಸರಕಾರ ಕಟ್ಟೆಚ್ಚರ ವಹಿಸಬೇಕು. ಇಲ್ಲವಾದರೆ ಮತ್ತೊಂದು ಗೋಧ್ರಾ ದುರಂತವನ್ನು ಕರ್ನಾಟಕದಲ್ಲಿ ನೋಡಬೇಕಾದೀತು ಎಂದು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಬಿ.ಕೆ.ಹರಿಪ್ರಸಾದ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆ ಸಮಾರಂಭ ಧಾರ್ಮಿಕ ಕಾರ್ಯಕ್ರಮವಲ್ಲ, ಇದೊಂದು ರಾಜಕೀಯ ಕಾರ್ಯಕ್ರಮ. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ, ಧಾರ್ಮಿಕ ಮುಖಂಡರು ಭಾಗಿಯಾಗಬೇಕಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇವು ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೇ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಉದ್ಘಾಟನೆಗೆ ಹೋಗುತ್ತಿದ್ದೆವು ಎಂದು ಹರಿಪ್ರಸಾದ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಅವರೇನು ಧರ್ಮ ಗುರುಗಳಾ ಇದು ರಾಜಕೀಯ ಕಾರ್ಯಕ್ರಮ. ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here