Home Uncategorized ರಾಜ್ಯ ಸರಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಗೆ ನೋಂದಣಿ ಪ್ರಾರಂಭ

ರಾಜ್ಯ ಸರಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಗೆ ನೋಂದಣಿ ಪ್ರಾರಂಭ

21
0

ಉಡುಪಿ: ರಾಜ್ಯ ಸರಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಡಿ.26ರ ಮಂಗಳವಾರದಿಂದ ನೋಂದಣಿ ಪ್ರಾರಂಭಗೊಳ್ಳಲಿದೆ.

2023-24ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ, 6 ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ. ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ 3000ರೂ., ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ 1500ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಅರ್ಜಿ ಸಲ್ಲಿಸಲು ಮಾನದಂಡ: ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಇದು ಲಭ್ಯ. ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ್ಟ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು. ಅಭ್ಯರ್ಥಿ 6 ವರ್ಷ ರಾಜ್ಯದಲ್ಲಿ ವಾಸವಿರು ವುದನ್ನು ಆತನ ಎಸೆಸೆಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ/ಅಂಕಪಟ್ಟಿಗಳು ಅಥವಾ ಎಸೆಸೆಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಡಿಪ್ಲೋಮಾ ಪ್ರಮಾಣ ಪತ್ರ/ಅಂಕಪಟ್ಟಿ ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣ ಪತ್ರ ಅಥವಾ ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣ ಪತ್ರ ಎನ್‌ಐಒಎಸ್ ನೀಡಿದ ಎಸೆಸೆಲ್ಸಿ ಅಂಕಪಟ್ಟಿಯನ್ನೂ ಸಹ ವಾಸ ಸ್ಥಳ ಪರಿಶೀಲನೆಗಾಗಿ ಪರಿಗಣಿಸುವುದು.

ಅಭ್ಯರ್ಥಿಯ ಪದವಿ/ಡಿಪ್ಲೋಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು ಎನ್‌ಎಡಿಯಲ್ಲಿ ಅಪ್ಲೋಡ್ ಮಾಡಲಾದ ಅಭ್ಯರ್ಥಿಗಳ ಪದವಿ/ಡಿಪ್ಲೋಮಾ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪದವಿ/ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದು.

ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಮೊದಲು ಡಿಜಿಲಾಕರ್‌ನಲ್ಲಿ ಡಿಜಿಲಾಕರ್ ಖಾತೆಯನ್ನು ಸೃಜಿಸುವ ಮೂಲಕ ತಮ್ಮ ಎನ್‌ಎಡಿ (ನೇಶನಲ್ ಅಕಾಡೆಮಿಕ್ ಡೆಪಾಸಿಟ್ರಿ) ಪ್ರಮಾಣ ಪತ್ರವನ್ನು ಪಡೆದಿರುವುದನ್ನು ಖಚಿತ ಪಡಿಸಿಕೊಳ್ಳಬೇಕು.

2023ರಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾಗಿ180 ದಿನಗಳು ಕಳೆದರೂ ಉದ್ಯೋಗ ಲಭಿಸದವರು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ 2 ವರ್ಷ ಗರಿಷ್ಟ ಅವಧಿವರೆಗೆ ಮಾತ್ರ ಈ ಭತ್ಯೆ ಸಿಗಲಿದೆ.

ಯಾವುದೇ ಅಪ್ರೆಂಟಿಸ್ ಹುದ್ದೆಯಲ್ಲಿದ್ದು ವೇತನ ಪಡೆಯುತ್ತಿರುವವರು, ಸರಕಾರಿ-ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ಸರಕಾರದ ನಾನಾ ಯೋಜನೆಗಳಡಿ ಬ್ಯಾಂಕ್ ಸಾಲಪಡೆದು ಸ್ವ-ಉದ್ಯೋಗ ಆರಂಭಿಸಿ ದವರು ಈ ಯೋಜನೆಗೆ ಅರ್ಹರಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೋಂದಣಿಗೆ ಏನೇನು ಅಗತ್ಯವಿದೆ

ಅರ್ಜಿ ಸಲ್ಲಿಸಲು ಮತದಾರರ ಗುರುತಿನ ಚೀಟಿ, ಪದವಿ ಅಭ್ಯರ್ಥಿ ಗಳಾಗಿದ್ದರೆ ಅಂಕಪಟ್ಟಿ ಮತ್ತು ವಿಶ್ವವಿದ್ಯಾಲಯದ ಪದವಿ ಪ್ರಮಾಣ ಪತ್ರ, ಡಿಪ್ಲೋಮಾ ಹೊಂದಿದ್ದರೆ ಸಂಬಂಧಿಸಿದ ಶಿಕ್ಷಣ ಇಲಾಖೆಯಿಂದ ನೀಡಿದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮತ್ತು ಅದರ ಮಾಹಿತಿ ಅಗತ್ಯವಿದೆ.

ಸೇವಾಸಿಂಧು, ಗ್ರಾಮ ಒನ್, ಕರ್ನಾಟಕ ಒನ್ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು.

ಸ್ವಯಂಘೋಷಣೆ

ಅಭ್ಯರ್ಥಿ ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಿಸಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತ್ತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು (ಸ್ಟೇಟ್ ಮೆಂಟ್) ಪ್ರತಿ ನೀಡಬೇಕು. ಪದವಿ, ಡಿಪ್ಲೋಮಾ ಬಳಿಕ ಉನ್ನತ ಶಿಕ್ಷಣ ಮುಂದು ವರಿಸಿದರೆ ಈ ಭತ್ಯೆಗೆ ಅರ್ಹರಾಗುವುದಿಲ್ಲ.

LEAVE A REPLY

Please enter your comment!
Please enter your name here