Home Uncategorized ರಾಮನಗರ: ಚಲಿಸುವಾಗಲೇ ಬೇರ್ಪಟ್ಟ ತೂತುಕುಡಿ ಎಕ್ಸ್‌ಪ್ರೆಸ್‌ ರೈಲು ಬೋಗಿಗಳು!

ರಾಮನಗರ: ಚಲಿಸುವಾಗಲೇ ಬೇರ್ಪಟ್ಟ ತೂತುಕುಡಿ ಎಕ್ಸ್‌ಪ್ರೆಸ್‌ ರೈಲು ಬೋಗಿಗಳು!

30
0

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟೆ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟೆ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಚಲಿಸುತ್ತಿದ್ದ ರೈಲೊಂದರ ಬೋಗಿಗಳು ಬೇರ್ಪಟಿದ್ದು, ಈ ವೇಳೆ ರೈಲಿನಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾದರು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ತೂತುಕುಡಿ ಎಕ್ಸ್‌ಪ್ರೆಸ್‌ ರಾತ್ರಿ 8ರ ವೇಳೆಗೆ ರಾಮನಗರ ನಿಲ್ದಾಣ ತಲುಪಿದ್ದು, ಅಲ್ಲಿಂದ ಮತ್ತೆ ಪ್ರಯಾಣ ಮುಂದುವರಿಸುತ್ತಲೇ ಶಬ್ದ ಕಾಣಿಸಿಕೊಂಡಿತು. ನೋಡುನೋಡುತ್ತಲೇ ರೈಲಿನ ಮಧ್ಯಭಾಗದ ಬೋಗಿಗಳು ಬೇರ್ಪಟ್ಟಿವೆ. 

ಇದನ್ನೂ ಓದಿ: ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ

ಇದರಿಂದ ರೈಲಿನಲ್ಲಿ ಇದ್ದ ಪ್ರಯಾಣಿಕರು ಬೆಚ್ಚಿ ಬಿದ್ದರು. ನಂತರ ರೈಲು ಅಲ್ಲಿಯೇ ನಿಂತಿತು. ಘಟನೆಯಲ್ಲಿ ಅದೃಷ್ಟವಶಾತ್‌ ಯಾರಿಗೂ ಗಾಯವಾಗಿಲ್ಲ.

Emergency @RailMinIndia .

Train number 16236 Mysuru to TutiCorin train coaches are detached near Ramanagar station.
I don’t see any officials here. Is it going to be repaired or pasngr should switch to other train.This is a Major incident & there is no one to tell anything. pic.twitter.com/pt9hpvzyfF
— Shrijith V (@shrijith_v) April 23, 2023

ಈ ಬಗ್ಗೆ ಮಾಹಿತಿ ನೀಡಿರುವ ಪ್ರಯಾಣಿಕರೊಬ್ಬರು, ‘ರೈಲು ರಾಮನಗರ ನಿಲ್ದಾಣ ಬಿಟ್ಟು ಹೊರಟಿತ್ತು. ಆ ವೇಳೆ ಏಕಾಏಕಿ ಶಬ್ದ ಬಂತು. ನೋಡಿದರೆ ನಾವಿದ್ದ ಬೋಗಿಯು ಮುಂದೆ ಇದ್ದ ಬೋಗಿಯಿಂದ ಬೇರ್ಪಟ್ಟಿದ್ದು, ಹಳಿ ಮೇಲೆ ಹಾಗೆಯೇ ನಿಂತುಕೊಂಡಿತ್ತು. ಇದರಿಂದ ಗಾಬರಿಗೊಂಡೆವು. ಆದಾಗ್ಯೂ ರೈಲ್ವೆ ಸಿಬ್ಬಂದಿ ನೆರವಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೊಬೈಲ್ ಕಸಿದುಕೊಂಡವನನ್ನು ಹಿಡಿಯಲು ಚಲಿಸುವ ರೈಲಿನಿಂದ ಕೆಳಗೆ ಹಾರಿದ ಮಹಿಳೆ!

ವಿಚಾರ ತಿಳಿದಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆ ವಿಚಾರವಾಗಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಘಟನೆ ಬಳಿಕ ತೂತುಕ್ಕುಡಿ ಎಕ್ಸ್‌ಪ್ರೆಸ್‌ ರಾಮನಗರ ನಿಲ್ದಾಣದಲ್ಲೇ ನಿಂತಿದ್ದು, ಹಳಿಗಳ ಜೋಡಣೆ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಮತ್ತೊಂದು ಹಳಿಯಲ್ಲಿ ಬೆಂಗಳೂರು–ಮೈಸೂರು ನಡುವಿನ ರೈಲುಗಳು ಸಂಚಾರ ಮುಂದುವರಿಸಿದವು.

ಭಾನುವಾರವಾದ್ದರಿಂದ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ತೂತುಕ್ಕುಡಿ ರೈಲಿನಲ್ಲಿದ್ದವರು ಬೆಂಗಳೂರಿಗೆ ಪ್ರಯಾಣ ಮುಂದುವರಿಸಲು ಪರದಾಡಿದರು. ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದ ಪ್ರಯಾಣಿಕರು ನಿಲ್ದಾಣದಲ್ಲೇ ನಿಂತಿದ್ದು, ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ನಿಲ್ದಾಣದ ಅಧಿಕಾರಿಗಳನ್ನು ಒತ್ತಾಯಿಸಿದರು.

LEAVE A REPLY

Please enter your comment!
Please enter your name here