ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಮನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ತಮಿಳುನಾಡು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎಡೆ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿದರು. ಬಾಯಿ ಬಡಿದುಕೊಂಡು ‘ಮತ್ತೆ ಹುಟ್ಟಿ ಬರಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕಾವೇರಿ’ಗಾಗಿ ಬೆಂಗಳೂರು ಬಂದ್: ತಮಿಳುನಾಡು ಬಸ್ ಸೇವೆಗೆ ಅಡ್ಡಿ, ಪ್ರಯಾಣಿಕರು, ಐಟಿ ಉದ್ಯೋಗಿಗಳಿಗೆ ತೊಂದರೆ!
#WATCH | Karnataka Rakshana Vedike stage protest over the Cauvery water release to Tamil Nadu, in Karnataka’s Ramanagara. pic.twitter.com/BQxGGxUVJE
— ANI (@ANI) September 26, 2023
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ, ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು, ರಾಜ್ಯದ ಜನರ ಹಿತವನ್ನು ಬಲಿಕೊಡುವ ಬದಲು ಕೂಡಲೇ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಬೇಕು, ನಾಡಿನ ಜೀವನದಿ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದರು.
