ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ , ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಪೊಲೀಸ್ ಕಸ್ಟಡಿ ನೀಡಿ ಕೋರ್ಟ್ ಆದೇಶಿದೆ.
ನಾಳೆಗೆ ಪೊಲೀಸ್ ಕಸ್ಟಡಿ ಮುಗಿಯುತ್ತಿದ್ದರೂ, ಒಂದು ದಿನ ಮುಂಚಿತವಾಗಿ ಪೊಲೀಸರು ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬೆಂಗಳೂರಿನಲ್ಲಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರಿಪಡಿಸಿದ್ದರು.
ಈ ವೇಳೆ ಆರೋಪಿಗಳನ್ನು ಮತ್ತಷ್ಟು ವಿಚಾರಣೆ ಮಾಡಬೇಕಿದೆ. ಮೈಸೂರಿನಲ್ಲಿ ಸ್ಥಳ ಮಹಜರು ಮಾಡಬೇಕಿದೆ. ಹೀಗಾಗಿ ಕನಿಷ್ಠ ಎಂಟು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕು ಎಂದು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರ್ಟ್ಗೆ ಮನವಿ ಮಾಡಿದರು.
ಈ ವೇಳೆ ಆರೋಪಿಗಳ ಪರ ವಕೀಲರು ಪೊಲೀಸ್ ಕಸ್ಟಡಿ ಗೆ ನೀಡಲು ವಿರೋಧಿಸಿದರು. ವಾದ ಪ್ರತಿವಾದಿ ಆಲಿಸಿದ ನ್ಯಾಯಾಧೀಶರು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿದರು.