Home ಕರ್ನಾಟಕ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿ : ಮರ್ಮಾಂಗ ಸೇರಿ ದೇಹದ 15 ಭಾಗಗಳಲ್ಲಿ ಗಾಯ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿ : ಮರ್ಮಾಂಗ ಸೇರಿ ದೇಹದ 15 ಭಾಗಗಳಲ್ಲಿ ಗಾಯ

59
0

ಬೆಂಗಳೂರು: ಕೊಲೆ ಪ್ರಕರಣ ಸಂಬಂಧ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರಿಗೆ ತಲುಪಿದ್ದು, ಆತನ ಮರ್ಮಾಂಗ ಸೇರಿ ದೇಹದ 15 ಭಾಗಗಳಲ್ಲಿ ಗಾಯವಾಗಿರುವುದು ದೃಢಪಟ್ಟಿದೆ ಎಂಬುದು ವರದಿಯಲ್ಲಿ ನಮೂದಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೌರಿಂಗ್ ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ವರದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೀಡಿದ್ದಾರೆ. ವರದಿಯಲ್ಲಿ ರೇಣುಕಾಸ್ವಾಮಿ ದೇಹದ ಯಾವ ಭಾಗದಲ್ಲಿ ರಕ್ತ ಬಂದಿತ್ತು?. ಎಲ್ಲೆಲ್ಲಿ ಗಾಯಗಳಾಗಿತ್ತು ಎಂಬುದನ್ನು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿಯ ಮರ್ಮಾಂಗದ ಮೇಲೆ ಹಲ್ಲೆ ಮಾಡಿರುವುದು ಗೊತ್ತಾಗಿದ್ದು, ಆ ಭಾಗದಲ್ಲಿ ರಕ್ತಸ್ರಾವವಾಗಿದೆ. ಮರ್ಮಾಂಗಕ್ಕೆ ಹೊಡೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಅಲ್ಲದೇ, ಹೊಟ್ಟೆ ಭಾಗದಲ್ಲಿಯೂ ರಕ್ತ ಸೋರಿಕೆಯಾಗಿದೆ. ತಲೆಗೂ ಬಲವಾದ ಪೆಟ್ಟು ಬಿದ್ದಿದೆ. ಆದರೆ, ರಕ್ತ ಸೋರಿಕೆಯಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

ಕೈ ಮತ್ತು ಕಾಲುಗಳಲ್ಲಿ, ಬೆನ್ನು ಹಾಗೂ ಎದೆ ಭಾಗದಲ್ಲೂ ರಕ್ತ ಬಂದಿದೆ. ತೀವ್ರ ಹಲ್ಲೆಯಿಂದ ದೇಹದಲ್ಲಿ ರಕ್ತ ಹೆಪ್ಪುಗಟ್ಟಿ ಸಾವಾಗಿದೆ. ಮರದ ಪೀಸ್, ಬೆಲ್ಟ್ ಬಳಸಿ ಹಲ್ಲೆ ಮಾಡಲಾಗಿದ್ದು, ಮೃತದೇಹದ ಮುಖ ಮತ್ತು ದವಡೆ ಭಾಗವನ್ನು ನಾಯಿಗಳು ಕಿತ್ತು ತಿಂದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here