ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಸಿನಿಮಾ ಲವ್ ರೆಡ್ಡಿ (Love Reddy). ಟೈಟಲ್ ಹೇಳುವಂತೆ ಇದೊಂದು ಸುಂದರ ಪ್ರೇಮಕಥೆ ಜೊತೆಗೆ ಫ್ಯಾಮಿಲಿ ಎಮೋಷನಲ್ ಡ್ರಾಮಾ. ಈ ಸಿನಿಮಾ ಮೂಲಕ ಗಡಿನಾಡ ಪ್ರತಿಭೆ ಅಂಜನ್ ರಾಮಚಂದ್ರ (Anjay Ramachandra)ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದು, ನಾಯಕಿಯಾಗಿ ಶ್ರಾವಣಿ ನಟಿಸಿದ್ದಾರೆ. ಈ ಹಿಂದೆ ಲವ್ ರೆಡ್ಡಿ ಸಿನಿಮಾದ ಫಸ್ಟ್ ಲುಕ್ ನ್ನು (First Glimpse) ನಟಸಿಂಹ ಬಾಲಯ್ಯ ಬಿಡುಗಡೆ ಮಾಡಿದ್ದರು. ಇದೀಗ ಫಸ್ಟ್ ಝಲಕ್ ನ್ನು ಜನಪ್ರಿಯ ಶಾಸಕರಾದ ಪ್ರದೀಪ್ ಈಶ್ವರ್ (Pradeep Eshwar) ಅನಾವರಣ ಮಾಡಿ ತಮ್ಮೂರಿನ ಸಿನಿಮೋತ್ಸಾಹಿಗಳಿಗೆ ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ಆಯೋಜಿಸಿತ್ತು
ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಅಂಜನ್ ರಾಮಚಂದ್ರ ನಮ್ಮ ಜಿಲ್ಲೆಯ ಹುಡುಗ. ಇನ್ಫೋಸಿಸ್ ನಾರಾಯಣ್ ಮೂರ್ತಿಯವರಿಗೆ ಜನ್ಮ ಕೊಟ್ಟ ಜಿಲ್ಲೆ ನಮ್ಮದು. ಎರಡು ಭಾರತ ರತ್ನ, ಎರಡು ಪದ್ಮಶ್ರೀ, ಒಂದು ಪದ್ಮಭೂಷಣ ಪಡೆದ ಜಿಲ್ಲೆ ನಮ್ಮದು. ಆರ್ ಆರ್ ಆರ್ ಸೇರಿದಂತೆ ದೊಡ್ಡ ದೊಡ್ಡ ಸಿನಿಮಾಗಳಿಗೆ ಸಾಹಿತ್ಯ ಬರೆಯುವ ವರದರಾಜು ಚಿಕ್ಕಬಳ್ಳಾಪುರ ಇದ್ದಾರೆ. ಇಂತಹ ಜಿಲ್ಲೆಯಿಂದ ಅಂಜನ್ ರಾಮಚಂದ್ರನ್ ಹೀರೋ ಆಗಿ ಬರ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಈ ಸಿನಿಮಾವನ್ನು ಮಾಡಲಾಗಿದೆ. ಕನ್ನಡಿಗರು ಈ ಚಿತ್ರವನ್ನು ಆರಾಧಿಸಬೇಕು. ಹಾರೈಸಬೇಕು ಎಂದರು.
The post ಲವ್ ರೆಡ್ಡಿ ಸಿನಿಮಾದ ಫಸ್ಟ್ ಲುಕ್ ರಿಲೀಸ್: ಕಲಾವಿದರ ಬೆನ್ನುತಟ್ಟಿದ ಪ್ರದೀಪ್ ಈಶ್ವರ್! appeared first on Ain Live News.