Home Uncategorized ಲಿಂಗಾಯತ ಒಳ‌ ಪಂಗಡಗಳೆಲ್ಲವೂ ಒಂದೇ ಸೂರಿನಡಿ ಬರಬೇಕು: ಸಚಿವ ಎಂ.ಬಿ ಪಾಟೀಲ್

ಲಿಂಗಾಯತ ಒಳ‌ ಪಂಗಡಗಳೆಲ್ಲವೂ ಒಂದೇ ಸೂರಿನಡಿ ಬರಬೇಕು: ಸಚಿವ ಎಂ.ಬಿ ಪಾಟೀಲ್

21
0

ಬೆಂಗಳೂರು: ಲಿಂಗಾಯತರಲ್ಲಿ ಇರುವ 60-70 ಒಳಪಂಗಡಗಳೆಲ್ಲವೂ ಒಂದೇ ಸೂರಿನಡಿ ಬರಬೇಕು. ಹೀಗಾದರೆ ಮಾತ್ರ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಯ ಲಾಭ ಸಿಗುತ್ತದಷ್ಟೆ. ಇದನ್ನು ನಾನು ಮೊದಲಿನಿಂದಲೂ ಹೇಳುತ್ತ ಬಂದಿದ್ದೇನೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆದ ವೀರಶೈವ ಮಹಾಸಭಾದ ಅಧಿವೇಶನದಲ್ಲಿ ಭಾಗವಹಿಸದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೆಎಲ್ಇ ಸೊಸೈಟಿ ಅಧ್ಯಕ್ಷರಾದ ಪ್ರಭಾಕರ ಕೋರೆ ಅವರ 50ನೇ ವಿವಾಹ ವಾರ್ಷಿಕೋತ್ಸವ ಮತ್ತು ವಿಜಯಪುರದಲ್ಲಿ ನನ್ನದೇ ನೇತೃತ್ವದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮಗಳು ಪೂರ್ವ ನಿಗದಿತವಾಗಿದ್ದವು. ಹೀಗಾಗಿ, ದಾವಣಗೆರೆಯ   ವೀರಶೈವ ಮಹಾಸಭಾದ ಅಧಿವೇಶನದಲ್ಲಿ ಖುದ್ದಾಗಿ ಭಾಗವಹಿಸಲು ಆಗಲಿಲ್ಲ. ಆದರೆ, ಅಧಿವೇಶನಕ್ಕೆ ಸಂದೇಶ ಕಳಿಸಿ‌ಕೊಟ್ಟಿದ್ದೆ ಎಂದರು. 

ಅಧಿವೇಶನದಲ್ಲಿ ಜಾತಿ ಗಣತಿ ಕುರಿತು ನಿರ್ಣಯ ಅಂಗೀಕರಿಸಲಾಗಿದೆ.ಮೇಲಿನ ಎರಡೂ ಕಾರ್ಯಕ್ರಮಗಳು ಬಹಳ ದಿನಗಳ ಮೊದಲೇ ನಿಗದಿಯಾಗಿದ್ದವು. ಇಲ್ಲದಿದ್ದರೆ ನಾನೂ ಅಧಿವೇಶನಕ್ಕೆ ಹೋಗುತ್ತಿದ್ದೆ. ಅಧಿವೇಶನಕ್ಕೆ ನನ್ನನ್ನು ಉದ್ಘಾಟಕನನ್ನಾಗಿ ಆಹ್ವಾನಿಸಲಾಗಿತ್ತು. ಇದರಲ್ಲಿ ಅಸಮಾಧಾನದ ಪ್ರಶ್ನೆಯೇನೂ ಇಲ್ಲ’ ಎಂದು ಹೇಳಿದರು.

  

LEAVE A REPLY

Please enter your comment!
Please enter your name here