Home Uncategorized ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಿಗೆ ಕಾಣಿಕೆ ನೀಡಲು 'ಇ-ಹುಂಡಿ' ಆ್ಯಪ್: ಸಚಿವ ಜಮೀರ್‌ ಅಹ್ಮದ್‌ ಚಾಲನೆ

ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಿಗೆ ಕಾಣಿಕೆ ನೀಡಲು 'ಇ-ಹುಂಡಿ' ಆ್ಯಪ್: ಸಚಿವ ಜಮೀರ್‌ ಅಹ್ಮದ್‌ ಚಾಲನೆ

21
0

ಮುಸ್ಲಿಮರ ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ. ಬೆಂಗಳೂರು:  ಮುಸ್ಲಿಮರ ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಬೋರ್ಡ್ ಸಭೆ ಯಲ್ಲಿ ನೂತನ ಆಪ್‌ಗೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅವರು ಚಾಲನೆ ನೀಡಿದರು.

ದರ್ಗಾ ಹಾಗೂ ಮಸೀದಿಗಳಿಗೆ ಸಮುದಾಯ ನೀಡುವ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಆಗದಂತೆ ಜತೆಗೆ ನಿಗದಿತ ಉದ್ದೇಶಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಲು ಆಪ್ ಸಿದ್ದಪಡಿಸಲಾಗಿದೆ. ಮೊದಲಿಗೆ ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾ ದಲ್ಲಿ ಈ ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ನೀಲನಕ್ಷೆ ಸಿದ್ಧಪಡಿಸಲಾಗುವುದು: ಜಮೀರ್ ಅಹ್ಮದ್ ಖಾನ್

ಮುಂದಿನ ದಿನಗಳಲ್ಲಿ ವಖ್ಫ್ ವ್ಯಾಪ್ತಿಗೆ ಬರುವ 3131 ದರ್ಗಾ, 10,398 ಮಸೀದಿಗಳಲ್ಲೂ ಜಾರಿಗೊಳಿಸಲಾಗುವುದು. ಸಮುದಾಯ ಎಲ್ಲಿಂದ ಯಾವುದೇ ಸಮಯದಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡಬಹುದಾಗಿದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ವಕ್ಫ್ ಬೋರ್ಡ್ ಆಸ್ತಿಗಳ ಭಾರೀ ಒತ್ತುವರಿ ಕುರಿತು, ಅಕ್ರಮ ಒತ್ತುವರಿ ತೆರವು ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ಹೇಳಿದರು. ಹಲವು ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಕೆಲವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಜತೆ ಚರ್ಚೆ ನಡೆಸಲಾಗುವುದು. ಬಜೆಟ್ ನಂತರ ವಕ್ಫ್ ಆಸ್ತಿ ಅದಾಲತ್ ನಡೆಯಲಿದೆ ಎಂದರು.

ವಖ್ಫ್ ಆಸ್ತಿಗಳನ್ನು ಕೆಲವು ಸರ್ಕಾರಿ ಇಲಾಖೆ ಗಳೂ ಒತ್ತುವರಿ ಮಾಡಿದ್ದು ಆ ಬಗ್ಗೆ ಗಮನಹರಿಸಿ ತೆರವು ಮಾಡಲಾಗುವುದು. ಖಾಸಗಿಯವರ ಒತ್ತುವರಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಒಟ್ಟು ಆಸ್ತಿ ಒತ್ತುವರಿ ಆಗಿದೆ ಸರ್ಕಾರಿ ಮತ್ತು ಖಾಸಗಿ ಸೇರಿ ಎಂಬುದರ ಬಗ್ಗೆ ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣ ಗಳ ಬಗ್ಗೆ ಪಟ್ಟಿ ಮಾಡಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಂಡ್ಸರ್ ಮ್ಯಾನರ್ ಹೋಟೆಲ್ ಜಾಗ ಕ್ಕೆ ಕಡಿಮೆ ಬಾಡಿಗೆ ನಿಗದಿ ಆಗಿದ್ದು, ಮಾರುಕಟ್ಟೆ ದರದ ಪ್ರಕಾರ 2 ಕೋಟಿ ರೂ. ವರೆಗೂ ಬರಬೇಕಿದೆ. ಈ ಬಗ್ಗೆ ನ್ಯಾಯ ಲಯದಲ್ಲಿ ಹೋರಾಟ ನಡೆಸಬೇಕಿದೆ ಎಂದು ಬೋರ್ಡ್ ಸದಸ್ಯರು ಪ್ರಸ್ತಾಪ ಮಾಡಿದರು. ಈ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು.

ಇದನ್ನೂ ಓದಿ: ಹಜ್ ಯಾತ್ರಿಕರ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಸಚಿವ ಜಮೀರ್ ಅಹ್ಮದ್

ವಕ್ಪ್ ಬೋರ್ಡ್ ನಲ್ಲಿ 45 ಕೋಟಿ ರೂ. ಅನುದಾನ ಲಭ್ಯವಿದ್ದು, ಅದನ್ನು ಶಾಲಾ ಕಾಲೇಜು ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಲು ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸಚಿವರು ಸೂಚಿಸಿದರು.

LEAVE A REPLY

Please enter your comment!
Please enter your name here